Featured

ನಿರೂಪಣೆ ನೀವಿಲ್ಲದೆ ಅಪೂರ್ಣ : ಅನುಶ್ರೀ ಭಾವುಕ – vishwanews24

ಅಂದು ಇಂದು ಎಂದೆಂದಿಗೂ ಕನ್ನಡಕ್ಕೆ ಒಬ್ಬರೇ ಮಹಾ ನಿರೂಪಕಿ ಅದು ನೀವು  : ಅನುಶ್ರೀ ಭಾವುಕ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ  ಜು.11ರಂದು ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ನಟಿ ಜೊತೆ ಬಾಂಧವ್ಯ ಹೊಂದಿರುವ ನಿರೂಪಕಿ ಅನುಶ್ರೀ  ಅವರು ಅಪರ್ಣಾ ನಿಧನಕ್ಕೆ ಭಾವುಕರಾಗಿದ್ದಾರೆ. ನಿರೂಪಣೆ ನೀವಿಲ್ಲದೇ ಅಪೂರ್ಣ ಎಂದು ಕಂಬನಿ ಮಿಡಿದಿದ್ದಾರೆ.

ನಿರೂಪಣೆಗೆ ಘನತೆ ನೀವು, ಕನ್ನಡಕ್ಕೆ ಶೋಭೆ, ನಿರೂಪಣೆ ನೀವಿಲ್ಲದೆ ಅಪೂರ್ಣ ಅಪರ್ಣ ಅಕ್ಕ ಎಂದಿದ್ದಾರೆ ಅನುಶ್ರೀ. ಈ ವಿಚಾರ ನೋವು ತಂದಿದೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನಿಮ್ಮನ್ನು ಭೇಟಿಯಾದ ಕ್ಷಣ. ಇಂದಿಗೂ ಹಸಿರಾಗಿದೆ. ಅಂದು ಇಂದು ಎಂದೆಂದಿಗೂ ಕನ್ನಡಕ್ಕೆ ಒಬ್ಬರೇ ಮಹಾ ನಿರೂಪಕಿ ಅದು ನೀವು ಓಂ ಶಾಂತಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನುಶ್ರೀ ಬರೆದುಕೊಂಡಿದ್ದಾರೆ.

 

 

 

ಅಂದಹಾಗೆ, ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ.

ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ಗೂಡಿಸಿದ್ದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

12 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

12 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

13 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

13 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

13 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

14 hours ago