ನವದೆಹಲಿ: ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿ ಅಕ್ಷಯ್ಕುಮಾರ್ಗೆ ಸುಪ್ರೀಂಕೋರ್ಟ್ ಗಲ್ಲುಶಿಕ್ಷೆ ಕಾಯಂಗೊಳಿಸಿ ತೀರ್ಪು ನೀಡಿದೆ.
ಪ್ರಕರಣದ ಆರೋಪಿ ಅಕ್ಷಯ್ ಕುಮಾರ್ ತನಗೆ ಕೋರ್ಟ್ ವಿಧಿಸಿರುವ ಗಲ್ಲುಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಸ್ತಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪು ನೀಡಿತು.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್.ಭಾನುಮತಿ ನೇತೃತ್ವದ ತ್ರಿಸದಸ್ಯರ ಪೀಠ ಅರ್ಜಿ ವಿಚಾರಣೆ ನಡೆಸಿತು. ಮೊದಲು ಅಪರಾಧಿ ಅಕ್ಷಯ್ ಕುಮಾರ್ ಪರ ವಾದ ಮಂಡನೆ ಮಾಡಿದ ವಕೀಲ ಎ.ಪಿ.ಸಿಂಗ್, ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟ ದಾಖಲೆಗಳು ಹಾಗೂ ತನಿಖೆಯಲ್ಲಿ ದೋಷವಿದೆ. ಇಲ್ಲಿ ಮಾಧ್ಯಮಗಳು ಮತ್ತು ಸಾರ್ವಜನಿಕರ ಒತ್ತಡವೇ ಹೆಚ್ಚಾಗಿದೆ. ನನ್ನ ಕಕ್ಷಿದಾರರಾದ ಅಕ್ಷಯ್ ಕುಮಾರ್ ಸಿಂಗ್ ಅವರನ್ನು ವೃಥಾ ಸಿಕ್ಕಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದರು.
2012ರ ಡಿಸೆಂಬರ್ 16ರಂದು 23 ವರ್ಷದ ಯುವತಿ ನಿರ್ಭಯಾಳ ಮೇಲೆ ಆರು ಮಂದಿ ಚಲಿಸುತ್ತಿರುವ ಬಸ್ಸಿನಲ್ಲಿ ಅತ್ಯಾಚಾರವೆಸಗಿ ನಂತರ ಭೀಕರವಾಗಿ ಹತ್ಯೆಗೈದ್ದರು. ಅಕ್ಷಯ್ ಪರ ವಕೀಲರು ಕೇವಲ 21 ನಿಮಿಷಗಳಲ್ಲಿ ಎಲ್ಲಾ 6 ಮಂದಿ ಬಸ್ಸಿನಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಲು ಸಾಧ್ಯವಿಲ್ಲ ಎಂದು ಆರೋಪಿ ಪರ ವಾದ ಮಂಡಿಸುವಾಗ ಹೇಳಿ.ತಿಹಾರ್ ಜೈಲಿನ ನಿವೃತ್ತ ಅಧಿಕಾರಿಯ ಆದೇಶವನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಿದರು.
ಅರ್ಜಿಯನ್ನು ನಿರಾಕರಿಸುವಂತೆ ಒತ್ತಾಯಿಸಿದ ನಿರ್ಭಯಾ ಪೋಷಕರ ಪರ ವಕೀಲರು, ನಿರ್ಭಯಾ ಕೊಲೆ ಆರೋಪಿಗಳಿಗೆ ಸರಿಯಾದ ಶಿಕ್ಷೆ ನೀಡಿ ನ್ಯಾಯ ಒದಗಿಸದಿದ್ದರೆ ದೇವರು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಯಾವುದೇ ಕಾರಣಕ್ಕೂ ಜೀವದಾನ ನೀಡಬಾರದು ಎಂದು ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…