ನವದೆಹಲಿ: ನಿರ್ಭಯಾ ತಾಯಿ ಆಶಾದೇವಿಯವರ ನೋವು ನನಗೆ ಅರ್ಥವಾಗುತ್ತದೆ. ಅವರು ಸೋನಿಯಾಗಾಂಧಿಯವರನ್ನು ಉದಾಹರಣೆಯಾಗಿ ತೆಗೆದುಕೊಂಡು ಅವರಂತೆ ಅಪರಾಧಿಗಳನ್ನು ಕ್ಷಮಿಸಲು ನಾನು ಒತ್ತಾಯಿಸುತ್ತೇನೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಹೇಳಿದ್ದಾರೆ.
ಈ ಕುರಿತು ಅವರು ಟ್ವೀಟ್ ಮಾಡಿದ್ದು, ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸೋನಿಯಾ ಗಾಂಧಿಯವರು ತನ್ನ ಪತಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಿದ ನಳಿನಿ ಅವರಿಗೆ ಸೋನಿಯಾ ಗಾಂಧಿಯವರು ಕ್ಷಮೆ ನೀಡಿದ್ದಾರೆ. ನಾವು ನಿರ್ಭಯಾ ತಾಯಿ ಆಶಾದೇವಿಯವರ ಪರವಾಗಿ ಇದ್ದೇವೆ. ಆದರೆ ಈ ಗಲ್ಲು ಶಿಕ್ಷೆಯ ಪರವಾಗಿ ಇಲ್ಲ ಎಂದು ಹೇಳಿದ್ದಾರೆ. ಈ ಟ್ವೀಟ್ ಈಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
1991ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿಯವರನ್ನು ಹತ್ಯೆ ಮಾಡಿದ ಆರೋಪದ ಮೇಲೆ ನಳಿನಿ ಬಂಧನಕ್ಕೊಳಗಾಗಿ ಅಪರಾಧಿ ಎಂದು ಸಾಬೀತಾಗಿ ಸದ್ಯ ಜೈಲು ಶಿಕ್ಷೆ ಅನುಭವಿಸುತ್ತಿದ್ದಾಳೆ.
ವಿನಯ್, ಅಕ್ಷಯ್, ಪವನ್ ಮತ್ತು ಮುಕೇಶ್ ಸಿಂಗ್ ಎಂಬುವವರನ್ನು ನಿರ್ಭಯಾ ಅತ್ಯಾಚಾರ ಮತ್ತು ನಂತರ ಸಾವಿನ ಕೇಸಿನಲ್ಲಿ ಅಪರಾಧಿಗಳೆಂದು ದೆಹಲಿ ನ್ಯಾಯಾಲಯ ಘೋಷಿಸಿ ಜನವರಿ 22ರಂದು ಅವರನ್ನು ನೇಣಿಗೇರಿಸುವುದು ಎಂದು ಆದೇಶ ಹೊರಡಿಸಿತ್ತು. ಆದರೆ ಅದರಲ್ಲಿ ಮುಕೇಶ್ ಸಿಂಗ್ ಮತ್ತು ವಿನಯ್ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದರು. ಅವರ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ ಇದೀಗ ಫೆಬ್ರವರಿ 1ರಂದು ನೇಣಿಗೇರಿಸುವಂತೆ ಹೊಸ ಆದೇಶ ಹೊರಡಿಸಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…