ನಿರ್ಭಯಾ ಪ್ರಕರಣ : ಅಪರಾಧಿ ಮುಖೇಶ್ ಅರ್ಜಿ ವಜಾ , ಕಾಮುಕರಿಗೆ ಗಲ್ಲು ಶಿಕ್ಷೆ ಖಾಯಂ -Vishwanews24

ನವದೆಹಲಿ: ನಿರ್ಭಯಾ ಪ್ರಕರಣದ ಅಪರಾಧಿ ಮುಖೇಶ್ ಅರ್ಜಿಯನ್ನು ಸುಪ್ರೀಂಕೋರ್ಟಿನ ತ್ರಿ ಸದಸ್ಯ ಪೀಠ ವಜಾಗೊಳಿಸಿದೆ. ಫೆಬ್ರವರಿ 1ರಂದು ಪ್ರಕರಣ ನಾಲ್ವರು ಕಾಮುಕರಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ.

ರಾಷ್ಟ್ರಪತಿಗಳ ಕ್ಷಮಾದಾನದ ತೀರ್ಪಿನ ವಿರುದ್ಧ ಮುಖೇಶ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದನು. ಇಂದು ಸುಪ್ರೀಂಕೋರ್ಟ್ ಮುಖೇಶ್ ಅರ್ಜಿಯನ್ನು ವಜಾಗೊಳಿಸಿದೆ. ಎಲ್ಲ ಕಾನೂನು ಹೋರಾಟದ ಅವಕಾಶಗಳು ಅಂತ್ಯಗೊಂಡಿದ್ದು, ಫೆಬ್ರವರಿ 1ರಂದು ಗಲ್ಲು ಶಿಕ್ಷೆಗೆ ಒಳಗಾಗೋದು ಖಚಿತವಾಗಿದೆ.

ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರಿಗೆ ಅಪರಾಧಿ ಮುಕೇಶ್​​ ಸಿಂಗ್​ ಕ್ಷಮಾಧಾನ ಅರ್ಜಿ ಸಲ್ಲಿಸಿದ್ದನು. ಆದರೆ, ರಾಷ್ಟ್ರಪತಿ ಕ್ಷಮಾಧಾನ ಅರ್ಜಿಯನ್ನು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಮುಕೇಶ್​ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದ. ಮುಕೇಶ್​ ಪರ ವಕೀಲ ವಾದ ಮಂಡಿಸಿ, ಸರ್ಕಾರ ರಾಷ್ಟ್ರಪತಿಗಳ ಮುಂದೆ ಅಗತ್ಯವಾದ ದಾಖಲೆಗಳನ್ನು ಸಲ್ಲಿಸಿಲ್ಲ ಎಂದಿದ್ದರು.

ಇಷ್ಟೇ ಅಲ್ಲದೆ ಜೈಲಿನಲ್ಲಿರುವಾಗ ಸಾಕಷ್ಟು ಸಂಕಟ ಮತ್ತು ಅವಮಾನವನ್ನು ಅನುಭವಿಸಿದ್ದಾನೆ. ಮುಕೇಶ್​ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಅಲ್ಲದೆ, ಆತನನ್ನು ಒಂಟಿಯಾಗಿ ಜೈಲಿನ ಕೋಣೆಯಲ್ಲಿರಿಸಿ ಹಿಂಸಿಸಲಾಗಿದೆ ಎಂದು ಮಕೇಶ್​ ಪರ ವಕೀಲರು ವಾದ ಮಂಡಿಸಿದ್ದರು.

ಆದರೆ, ಜೈಲಿನಲ್ಲಿನ ಬಳಲಿಕೆ ಆಧಾರವನ್ನು ಇಟ್ಟುಕೊಂಡು ರಾಷ್ಟ್ರಪತಿಗಳು ತಿರಸ್ಕರಿಸಿದ ಕ್ಷಮಾಧಾನ ಅರ್ಜಿಯನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಹೇಳಿ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದೆ.

 

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago