ನವದೆಹಲಿ: ನಿರ್ಭಯಾ ಪ್ರಕರಣದ ದೋಷಿಗಳಿಗೆ ಮಾರ್ಚ್ 3ರಂದು ಡೆತ್ ವಾರೆಂಟ್ ಜಾರಿ ಮಾಡಲಾಗಿದೆ. ದೆಹಲಿ ಪಟಿಯಾಲಾ ಕೋರ್ಟ್ ಮಾರ್ಚ್ 3ರಂದು ಬೆಳಗ್ಗೆ 6 ಗಂಟೆಗೆ ಡೆತ್ ವಾರೆಂಟ್ ನೀಡಿ ಆದೇಶಿಸಿದೆ.
ಮೂರನೇ ಬಾರಿಗೆ ಪಟಿಯಾಲಾ ಕೋರ್ಟ್ ಡೆತ್ ವಾರೆಂಟ್ ಜಾರಿ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ದೋಷಿಗಳ ಪರ ವಕೀಲ ಎ.ಪಿ.ಸಿಂಗ್, ನಮ್ಮ ಮುಂದೆ ಕಾನೂನಿನ ಅವಕಾಶಗಳಿವೆ. ರಾಜಕೀಯ ನಾಯಕರ ಒತ್ತಡದಿಂದಾಗಿ ಗಲ್ಲು ಶಿಕ್ಷೆಯ ದಿನಾಂಕ ಪ್ರಕಟಿಸಲಾಗಿದೆ ಎಂದಿದ್ದಾರೆ.
ಅಪರಾಧಿಗಳಿಗೆ ಸಂಬಂಧಿಸಿದ ವರದಿಯನ್ನು ತಿಹಾರ್ ಜೈಲು ಅಧಿಕಾರಿಗಳು ಕೋರ್ಟ್ ಗೆ ಹಸ್ತಾಂತರಿಸಿದ್ದರು. ನಾಲ್ವರು ಅಪರಾಧಿಗಳಲ್ಲಿ ಮೂವರು ಈಗಾಗಲೇ ಎಲ್ಲಾ ಕಾನೂನು ಅವಕಾಶಗಳನ್ನು ಬಳಸಿಕೊಂಡಿದ್ದಾರೆ. ಬೇರೆ ಯಾವುದೇ ಕೋರ್ಟ್ ಗಳಲ್ಲಿ ಯಾವುದೇ ಅರ್ಜಿ ವಿಚಾರಣೆಗೆ ಬಾಕಿ ಇಲ್ಲ ಎಂದು ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀವ್ ಮೋಹನ್ ಕೋರ್ಟ್ ಗಮನಕ್ಕೆ ತಂದಿದ್ದರು.
ಅಲ್ಲದೇ ಏಳು ದಿನಗಳೊಳಗೆ ಎಲ್ಲಾ ಕಾನೂನು ಅವಕಾಶ ಬಳಸಿಕೊಳ್ಳುವಂತೆ ದೆಹಲಿ ಹೈಕೋರ್ಟ್ ಅಪರಾಧಿಗಳಿಗೆ ಅಂತಿಮ ಗಡುವು ನೀಡಿದ್ದು, ಆ ಅವಧಿ ಮುಕ್ತಾಯಗೊಂಡಿದೆ ಎಂದು ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ವಿನಯ್ ಶರ್ಮಾ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಫೆ.14ರಂದು ವಜಾಗೊಳಿಸಿತ್ತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡಾ ಅಕ್ಷಯ್ ಠಾಕೂರ್ ಮತ್ತು ಮುಕೇಶ್ ಸಿಂಗ್ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಫೆ.5ರಂದು ನಾಲ್ವರು ದೋಷಿಗಳಿಗೆ ಎಲ್ಲಾ ಕಾನೂನು ಅವಕಾಶ ಬಳಸಿಕೊಳ್ಳಲು ಒಂದು ವಾರಗಳ ಕಾಲಾವಕಾಶ ನೀಡಿತ್ತು.
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…