ನಿರ್ಭಯಾ ಪ್ರಕರಣ : ಆರೋಪಿಗಳಿಗೆ ಮಾರ್ಚ್ 3ರಂದು ಗಲ್ಲುಶಿಕ್ಷೆ -Vishwanews24

ನವದೆಹಲಿ: ನಿರ್ಭಯಾ ಪ್ರಕರಣದ ದೋಷಿಗಳಿಗೆ ಮಾರ್ಚ್ 3ರಂದು ಡೆತ್ ವಾರೆಂಟ್ ಜಾರಿ ಮಾಡಲಾಗಿದೆ. ದೆಹಲಿ ಪಟಿಯಾಲಾ ಕೋರ್ಟ್ ಮಾರ್ಚ್ 3ರಂದು ಬೆಳಗ್ಗೆ 6 ಗಂಟೆಗೆ ಡೆತ್ ವಾರೆಂಟ್ ನೀಡಿ ಆದೇಶಿಸಿದೆ.

ಮೂರನೇ ಬಾರಿಗೆ ಪಟಿಯಾಲಾ ಕೋರ್ಟ್ ಡೆತ್ ವಾರೆಂಟ್ ಜಾರಿ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ದೋಷಿಗಳ ಪರ ವಕೀಲ ಎ.ಪಿ.ಸಿಂಗ್, ನಮ್ಮ ಮುಂದೆ ಕಾನೂನಿನ ಅವಕಾಶಗಳಿವೆ. ರಾಜಕೀಯ ನಾಯಕರ ಒತ್ತಡದಿಂದಾಗಿ ಗಲ್ಲು ಶಿಕ್ಷೆಯ ದಿನಾಂಕ ಪ್ರಕಟಿಸಲಾಗಿದೆ ಎಂದಿದ್ದಾರೆ.

ಅಪರಾಧಿಗಳಿಗೆ ಸಂಬಂಧಿಸಿದ ವರದಿಯನ್ನು ತಿಹಾರ್ ಜೈಲು ಅಧಿಕಾರಿಗಳು ಕೋರ್ಟ್ ಗೆ ಹಸ್ತಾಂತರಿಸಿದ್ದರು. ನಾಲ್ವರು ಅಪರಾಧಿಗಳಲ್ಲಿ ಮೂವರು ಈಗಾಗಲೇ ಎಲ್ಲಾ ಕಾನೂನು ಅವಕಾಶಗಳನ್ನು ಬಳಸಿಕೊಂಡಿದ್ದಾರೆ. ಬೇರೆ ಯಾವುದೇ ಕೋರ್ಟ್ ಗಳಲ್ಲಿ ಯಾವುದೇ ಅರ್ಜಿ ವಿಚಾರಣೆಗೆ ಬಾಕಿ ಇಲ್ಲ ಎಂದು ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೀವ್ ಮೋಹನ್ ಕೋರ್ಟ್ ಗಮನಕ್ಕೆ ತಂದಿದ್ದರು.

ಅಲ್ಲದೇ ಏಳು ದಿನಗಳೊಳಗೆ ಎಲ್ಲಾ ಕಾನೂನು ಅವಕಾಶ ಬಳಸಿಕೊಳ್ಳುವಂತೆ ದೆಹಲಿ ಹೈಕೋರ್ಟ್ ಅಪರಾಧಿಗಳಿಗೆ ಅಂತಿಮ ಗಡುವು ನೀಡಿದ್ದು, ಆ ಅವಧಿ ಮುಕ್ತಾಯಗೊಂಡಿದೆ ಎಂದು ತಿಳಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ವಿನಯ್ ಶರ್ಮಾ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಫೆ.14ರಂದು ವಜಾಗೊಳಿಸಿತ್ತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡಾ ಅಕ್ಷಯ್ ಠಾಕೂರ್ ಮತ್ತು ಮುಕೇಶ್ ಸಿಂಗ್ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಫೆ.5ರಂದು ನಾಲ್ವರು ದೋಷಿಗಳಿಗೆ ಎಲ್ಲಾ ಕಾನೂನು ಅವಕಾಶ ಬಳಸಿಕೊಳ್ಳಲು ಒಂದು ವಾರಗಳ ಕಾಲಾವಕಾಶ ನೀಡಿತ್ತು.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

2 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago