ನವದೆಹಲಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಪ್ರಕರಣದ ಅಪರಾಧಿಯೋರ್ವ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದ್ದು, ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಮಂಗಳವಾರ ಡೆತ್ ವಾರಂಟ್ ಜಾರಿ ಮಾಡಿದೆ. ಜನವರಿ 22ರ ಬುಧವಾರ ಬೆಳಗ್ಗೆ 7 ಗಂಟೆಗೆ ನಾಲ್ವರಿಗೂ ಮರಣದಂಡನೆ ಶಿಕ್ಷೆ ವಿಧಿಸಲು ಕೋರ್ಟ್ ಡೆತ್ ವಾರಂಟ್ ಜಾರಿಗೊಳಿಸಿದೆ.
ಕಾನೂನಿನ ಪ್ರಕಾರ, ಅಪರಾಧಿಗಳಿಗೆ ದೊರೆಯಬೇಕಾದ ಎಲ್ಲಾ ಕಾನೂನು ಅವಕಾಶಗಳ ಬಾಗಿಲು ಸಂಪೂರ್ಣ ಮುಚ್ಚಿದ ನಂತರ ಕೊನೆಯ ಹಂತವಾದ ಮರಣದಂಡನೆ ಪ್ರಕ್ರಿಯೆಗಾಗಿ ಕೋರ್ಟ್ ಬ್ಲ್ಯಾಕ್ ವಾರಂಟ್ (ಡೆತ್ ವಾರಂಟ್) ಹೊರಡಿಸುತ್ತದೆ.
ಈಗಾಗಲೇ ನಿರ್ಭಯಾ ಪ್ರಕರಣದ ಆರೋಪಿಗಳನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದ್ದು, ಜೈಲು ಅಧಿಕಾರಿಗಳು ಮರಣದಂಡನೆಗೆ ಅಂತಿಮ ಸಿದ್ದತೆ ಮಾಡಿಕೊಳ್ಳುತ್ತಿದ್ದು ನ್ಯಾಯಾಲಯದ ಆದೇಶಕ್ಕೆ ಕಾಯುತ್ತಿದ್ದರು. ಇನ್ನು ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸಲು ತಿಹಾರ್ ಜೈಲಿನಲ್ಲಿ ಹೊಸ ವಧಾಸ್ಥಳವನ್ನು ನಿರ್ಮಿಸಲಾಗುತಿದ್ದು, ಜೈಲು ಸಂಖ್ಯೆ ಮೂರರಲ್ಲಿ ಈ ಈ ಮೊದಲು ವಧಾಸ್ಥಳ ಇತ್ತು, ಅದರ ಪಕ್ಕದಲ್ಲೇ ನೂತನ ವಧಾಸ್ಥಳವನ್ನು ನಿರ್ಮಿಸಲಾಗುತ್ತಿದೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…