ಉಡುಪಿ : ಪಟ್ಲ ಶಾಲೆಯ ನಿವೃತ್ತ ಶಿಕ್ಷಕ, ಗುತ್ತಿಗೆದಾರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಉಡುಪಿ ಜಿಲ್ಲಾ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷರಾದ ಹಿರಿಯ ರಾಜಕೀಯ ಮುಖಂಡ ಪಟ್ಲ ಅಣ್ಣಯ್ಯ ನಾಯಕ್ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ತೀವೃ ಸಂತಾಪ ವ್ಯಕ್ತಪಡಿಸಿದ್ದಾರೆ.
ಜನಸಂಘ, ಆರ್.ಎಸ್.ಎಸ್., ಮತ್ತು ಬಿಜೆಪಿ ಸಂಘಟನೆಗಳಲ್ಲಿ ತನ್ನನ್ನು ತಾನು ಸವೆಸಿ ದುಡಿದದ್ದು ಅವರ ರಾಷ್ಟ್ರಭಕ್ತಿಗೆ ಒಂದು ಉತ್ತಮ ಉದಾಹರಣೆ. ದಿ. ಕರಂಬಳ್ಳಿ ಸಂಜೀವ ಶೆಟ್ಟಿಯವರನ್ನು ತನ್ನ ರಾಜಕೀಯ ಗುರುಗಳಾಗಿ ಮತ್ತು ದಿ. ಡಾ. ವಿ. ಎಸ್. ಆಚಾರ್ಯರ ಅತ್ಯಂತ ಆತ್ಮೀಯರಲ್ಲಿ ಒಬ್ಬರಾಗಿದ್ದ ಪಟ್ಲ ಅಣ್ಣಯ್ಯ ನಾಯಕ್ ಅವರು ಆರ್.ಎಸ್.ಬಿ. ಸಂಘದ ಸದಸ್ಯರಾಗಿ, ಅಧ್ಯಕ್ಷರಾಗಿ ಮತ್ತು ಬಂಟಕಲ್ಲು ದೇವಾಲಯದ ಆಡಳಿತ ಮಂಡಳಿ ಸದಸ್ಯರಾಗಿ ಸ್ವಸಮಾಜದ ಸೇವೆ ಸದಾ ಮಾನನೀಯವಾದದ್ದು ಎಂದು ತಿಳಿಸಿರುವ ಕುಯಿಲಾಡಿ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ ಪರ್ಕಳ ಇದರ ಮಾಜಿ ಅಧ್ಯಕ್ಷರಾಗಿ ಹಾಗೂ ಹಲವಾರು ಸಂಘಸಂಸ್ಥೆಗಳಲ್ಲಿ ಸಕ್ರೀಯವಾಗಿ ತನ್ನನ್ನು ತೊಡಗಿಸಿಕೊಂಡಿದ್ದ ಪಟ್ಲ, ಇಂದು ಒಬ್ಬ ಸಹಾಯಿ, ಸೇವಕ, ಉದಾರಿ ಮತ್ತು ದೊಡ್ಡ ಕನಸಿನ ಹಿರಿಯರೊಬ್ಬರನ್ನು ಕಳೆದುಕೊಂಡ ಅನಾಥ ಪ್ರಜ್ಞೆ ಪಟ್ಲ ಪರಿಸರಕ್ಕೆ ಬಾಧಿಸಿದೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಕುಯಿಲಾಡಿ ಸುರೇಶ್ ನಾಯಕ್ ರವರು ಸಂತಾಪದಲ್ಲಿ ತಿಳಿಸಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…