ಉಡುಪಿ : ಪಟ್ಲ ಶಾಲೆಯ ನಿವೃತ್ತ ಶಿಕ್ಷಕ, ಗುತ್ತಿಗೆದಾರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಉಡುಪಿ ಜಿಲ್ಲಾ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷರಾದ ಹಿರಿಯ ರಾಜಕೀಯ ಮುಖಂಡ ಪಟ್ಲ ಅಣ್ಣಯ್ಯ ನಾಯಕ್ ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ತೀವೃ ಸಂತಾಪ ವ್ಯಕ್ತಪಡಿಸಿದ್ದಾರೆ.
ಜನಸಂಘ, ಆರ್.ಎಸ್.ಎಸ್., ಮತ್ತು ಬಿಜೆಪಿ ಸಂಘಟನೆಗಳಲ್ಲಿ ತನ್ನನ್ನು ತಾನು ಸವೆಸಿ ದುಡಿದದ್ದು ಅವರ ರಾಷ್ಟ್ರಭಕ್ತಿಗೆ ಒಂದು ಉತ್ತಮ ಉದಾಹರಣೆ. ದಿ. ಕರಂಬಳ್ಳಿ ಸಂಜೀವ ಶೆಟ್ಟಿಯವರನ್ನು ತನ್ನ ರಾಜಕೀಯ ಗುರುಗಳಾಗಿ ಮತ್ತು ದಿ. ಡಾ. ವಿ. ಎಸ್. ಆಚಾರ್ಯರ ಅತ್ಯಂತ ಆತ್ಮೀಯರಲ್ಲಿ ಒಬ್ಬರಾಗಿದ್ದ ಪಟ್ಲ ಅಣ್ಣಯ್ಯ ನಾಯಕ್ ಅವರು ಆರ್.ಎಸ್.ಬಿ. ಸಂಘದ ಸದಸ್ಯರಾಗಿ, ಅಧ್ಯಕ್ಷರಾಗಿ ಮತ್ತು ಬಂಟಕಲ್ಲು ದೇವಾಲಯದ ಆಡಳಿತ ಮಂಡಳಿ ಸದಸ್ಯರಾಗಿ ಸ್ವಸಮಾಜದ ಸೇವೆ ಸದಾ ಮಾನನೀಯವಾದದ್ದು ಎಂದು ತಿಳಿಸಿರುವ ಕುಯಿಲಾಡಿ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ ಪರ್ಕಳ ಇದರ ಮಾಜಿ ಅಧ್ಯಕ್ಷರಾಗಿ ಹಾಗೂ ಹಲವಾರು ಸಂಘಸಂಸ್ಥೆಗಳಲ್ಲಿ ಸಕ್ರೀಯವಾಗಿ ತನ್ನನ್ನು ತೊಡಗಿಸಿಕೊಂಡಿದ್ದ ಪಟ್ಲ, ಇಂದು ಒಬ್ಬ ಸಹಾಯಿ, ಸೇವಕ, ಉದಾರಿ ಮತ್ತು ದೊಡ್ಡ ಕನಸಿನ ಹಿರಿಯರೊಬ್ಬರನ್ನು ಕಳೆದುಕೊಂಡ ಅನಾಥ ಪ್ರಜ್ಞೆ ಪಟ್ಲ ಪರಿಸರಕ್ಕೆ ಬಾಧಿಸಿದೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಕುಯಿಲಾಡಿ ಸುರೇಶ್ ನಾಯಕ್ ರವರು ಸಂತಾಪದಲ್ಲಿ ತಿಳಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…