ಬೆಂಗಳೂರು : ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಯನ್ನ ಹೆಚ್ಎಸ್ಆರ್ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ನಗರದ ಹೆಚ್ಎಸ್ಆರ್ ಲೇಔಟ್ನಲ್ಲಿರುವ ತಮ್ಮ ನಿವಾಸದಲ್ಲೇ ಓಂ ಪ್ರಕಾಶ್ ನಿನ್ನೆ ಭೀಕರವಾಗಿ ಹತ್ಯೆಯಾಗಿದ್ದು, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪುತ್ರ ದೂರು ನೀಡಿದ್ದರು. ಮೊದಲಿಗೆ ಯಾರನ್ನು ಬಂಧಿಸಿರಲಿಲ್ಲ. ಅವರ ಪತ್ನಿ, ಮಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು. ಇದೀಗ ಪ್ರಕರಣ ಸಂಬಂಧ ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರನ್ನು ಬಂಧಿಸಿಲಾಗಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪಲ್ಲವಿ, ಪುತ್ರಿ ಕೃತಿ, ಪುತ್ರ ಕಾರ್ತಿಕೇಶ್ ಸೇರಿದಂತೆ ಕುಟುಂಬಸ್ಥರು ಮತ್ತು ಸಂಬಂಧಿಕರ ಹೇಳಿಕೆಯನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಜೊತೆಗೆ ಒಟ್ಟು 3 ಮೊಬೈಲ್ ಸೀಜ್ ಮಾಡಿದ್ದಾರೆ. ಪ್ರಾಥಮಿಕ ವಿಚಾರಣೆ ವೇಳೆ ಆತ್ಮ ರಕ್ಷಣೆಗಾಗಿ ಕೊಲೆ ಮಾಡಿರುವುದಾಗಿ ಪತ್ನಿ ಪಲ್ಲವಿ ತಿಳಿಸಿದ್ದಾರೆ.
ಇದೀಗ ಪತ್ನಿ ಪಲ್ಲವಿ ಓಂ ಪ್ರಕಾಶ್ ಅವರ ಕೊಲೆ ರಹಸ್ಯ ಬಿಚ್ಚಿಟ್ಟಿದ್ದು, ಮೊದಲು ಓಂ ಪ್ರಕಾಶ್ ಮೇಲೆ ಖಾರದ ಪುಡಿ ಎರಚಿ, ಬಳಿಕ ಅಡುಗೆ ಎಣ್ಣೆಯನ್ನೂ ಸುರಿದಿದ್ದಾರೆ. ಕೈ ಕಾಲು ಕಟ್ಟಿ ಚಾಕುವಿನಿಂದ ಚುಚ್ಚಿದ್ದಾಗಿ ಪಲ್ಲವಿ ತಿಳಿಸಿದ್ದಾರೆ. ಓಂ ಪ್ರಕಾಶ್ಗೆ 8-10 ಬಾರಿ ಇರಿಯಲಾಗಿದ್ದು, ಎದೆ, ಹೊಟ್ಟೆ, ಕೈಗೆ ಚಾಕುವಿನಿಂದ ಇರಿಯಲಾಗಿದೆ. ಹೊಟ್ಟೆ ಭಾಗಕ್ಕೆ 4-5 ಬಾರಿ ಇರಿದು ಕೊಲೆ ಮಾಡಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…