Featured

ನಿಷೇಧಿತ ಡ್ರಗ್ಸ್‌ ಸೇವನೆ ಡೋಪ್‌ ಟೆಸ್ಟ್‌ನಲ್ಲಿ ಪತ್ತೆ : ಕಾಮನ್​ವೆಲ್ತ್ ಗೇಮ್ಸ್‌ನಿಂದ ಹೊರಬಿದ್ದ ಧನಲಕ್ಷ್ಮಿ,​ ಐಶ್ವರ್ಯಾ  – Vishwanews24

ನಿಷೇಧಿತ ಡ್ರಗ್ಸ್‌ ಸೇವನೆ ಡೋಪ್‌ ಟೆಸ್ಟ್‌ನಲ್ಲಿ ಪತ್ತೆ : ಕಾಮನ್​ವೆಲ್ತ್ ಗೇಮ್ಸ್‌ನಿಂದ ಹೊರಬಿದ್ದ ಅಗ್ರ ಓಟಗಾರ್ತಿ ಧನಲಕ್ಷ್ಮಿ,​ ಟ್ರಿಪಲ್ ಜಂಪರ್ ಐಶ್ವರ್ಯಾ

ನವದೆಹಲಿ: ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯಲಿರುವ ಕಾಮನ್​ವೆಲ್ತ್​ ಗೇಮ್ಸ್​ಗಾಗಿ ನಡೆಸಲಾಗುತ್ತಿರುವ ಡೋಪಿಂಗ್​ ಪರೀಕ್ಷೆಯಲ್ಲಿ ಅಗ್ರ ಓಟಗಾರ್ತಿ ಎಸ್.ಧನಲಕ್ಷ್ಮಿ, ರಾಷ್ಟ್ರೀಯ ದಾಖಲೆ ರಚಿಸಿದ ಟ್ರಿಪಲ್ ಜಂಪರ್ ಐಶ್ವರ್ಯಾ ಬಾಬು ವಿಫಲರಾಗಿದ್ದು ಕಾಮನ್​ವೆಲ್ತ್ ಗೇಮ್ಸ್‌ನಿಂದ ಹೊರಬಿದ್ದಿದ್ದಾರೆ.

ಬರ್ಮಿಂಗ್​ಹ್ಯಾಮ್ ಕಾಮನ್​ವೆಲ್ತ್​ ಗೇಮ್ಸ್ ಗಾಗಿ 36 ಸದಸ್ಯರ ಭಾರತೀಯ ಅಥ್ಲೆಟಿಕ್ಸ್ ತಂಡದಲ್ಲಿ ಸ್ಥಾನ ಪಡೆದಿರುವ 24 ವರ್ಷದ ಧನಲಕ್ಷ್ಮಿ, ವಿಶ್ವ ಅಥ್ಲೆಟಿಕ್ಸ್‌ನ ಅಥ್ಲೆಟಿಕ್ಸ್ ಇಂಟೆಗ್ರಿಟಿ ಯುನಿಟ್ (AIU) ವಿದೇಶದಲ್ಲಿ ನಡೆಸಿದ ಡೋಪ್ ಪರೀಕ್ಷೆಯಲ್ಲಿ ನಿಷೇಧಿತ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ.

ಕಳೆದ ತಿಂಗಳು ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ಅಂತರ್ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನಾಡಾ ಅಧಿಕಾರಿಗಳು 24 ವರ್ಷದ ಟ್ರಿಪಲ್ ಜಂಪರ್ ಐಶ್ವರ್ಯಾ ಬಾಬು ಅವರ ಸ್ಯಾಂಪಲ್ ಪಡೆದುಕೊಂಡಿದ್ದು, ಇವರು ಕೂಡಾ ಡೋಪ್ ಟೆಸ್ಟ್ ನಲ್ಲಿ ವಿಫಲರಾಗಿದ್ದಾರೆ.

ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಚಾಂಪಿಯನ್‌ಶಿಪ್‌ಗೂ ಧನಲಕ್ಷ್ಮಿ ಆಯ್ಕೆಯಾಗಿದ್ದರು. ಆದರೆ ವೀಸಾ ಸಮಸ್ಯೆಗಳಿಂದಾಗಿ ಟೂರ್ನಿಯಲ್ಲಿ ಪಾಲ್ಗೊಂಡಿರಲಿಲ್ಲ. ಇದೀಗ ಡೋಪಿಂಗ್​ ನಲ್ಲಿ ವಿಫರಾಗಿರುವ ಅವರು , ಕಾಮನ್​ವೆಲ್ತ್​ನಿಂದಲೂ ಹೊರಬಿದ್ದಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

9 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

10 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

10 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago