Featured

ನಿಷೇಧಿತ ಡ್ರಗ್ ಸೇವನೆ ಆರೋಪ : ಭಾರತದ ಡಿಸ್ಕಸ್ ಥ್ರೋ ಆಟಗಾರ್ತಿ ಕಮಲ್‌ಪ್ರೀತ್ ಕೌರ್ ಗೆ 3 ವರ್ಷ ನಿಷೇಧ – Vishwanews24

ನಿಷೇಧಿತ ಡ್ರಗ್ ಸೇವನೆ ಆರೋಪ : ಭಾರತದ ಒಲಿಂಪಿಕ್ಸ್‌ ಆಟಗಾರ್ತಿ ಕಮಲ್‌ಪ್ರೀತ್ ಕೌರ್ ಗೆ 3 ವರ್ಷ ನಿಷೇಧ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ತನ್ನ ಆಟದಿಂದ ಎಲ್ಲರ ಮನ ಗೆದ್ದಿದ್ದ ಭಾರತದ ಡಿಸ್ಕಸ್ ಎಸೆತಗಾರ್ತಿ ಕಮಲ್‌ಪ್ರೀತ್ ಕೌರ್ ವೃತ್ತಿಜೀವನಕ್ಕೆ ಭಾರಿ ಹಿನ್ನಡೆಯಾಗಿದೆ. ಅವರನ್ನು 3 ವರ್ಷಗಳ ಕಾಲ ಈ ಆಟದಿಂದ ನಿಷೇಧಿಸಲಾಗಿದೆ.

ಕಮಲ್​ಪ್ರೀತ್ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗದಿದ್ದರೂ, 63.70 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಪಟ್ಟಿಯಲ್ಲಿ ಆರನೇ ಸ್ಥಾನ ಪಡೆದಿದ್ದರು. ಇದು ಕಳೆದ 18 ವರ್ಷಗಳಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ಈವೆಂಟ್‌ನಲ್ಲಿ ಯಾವುದೇ ಭಾರತೀಯ ಮಹಿಳೆಯ ಜಂಟಿ ಎರಡನೇ ಅತ್ಯುತ್ತಮ ಪ್ರದರ್ಶನವಾಗಿದೆ. 2010ರಲ್ಲಿ ಕೃಷ್ಣಾ ಪೂನಿಯಾ ಕೂಡ ಆರನೇ ಸ್ಥಾನ ಪಡೆದಿದ್ದರು. 2004ರಲ್ಲಿ ಅಂಜು ಬಾಬಿ ಜಾರ್ಜ್ 5ನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

BREAKING _ ಹಿಜಾಬ್ ವಿವಾದ : ಸುಪ್ರೀಂಕೋರ್ಟ್​ನಿಂದ ವಿಭಜಿತ ತೀರ್ಪು ಪ್ರಕಟ..

26ರ ಹರೆಯದ ಕಮಲ್‌ಪ್ರೀತ್ ನಿಷೇಧಿತ ಡ್ರಗ್ ಸ್ಟ್ಯಾನೋಝೋಲೋಲ್ ಬಳಸಿದ್ದಕ್ಕಾಗಿ ಅವರ ಮೇಲೆ 3 ವರ್ಷಗಳ ಕಾಲ ನಿಷೇಧ ಹೇರಲಾಗಿದೆ ಎಂದು ಅಥ್ಲೆಟಿಕ್ಸ್ ಇಂಟೆಗ್ರಿಟಿ ಯೂನಿಟ್ ಘಟಕ ತಿಳಿಸಿದೆ.ಈ ವರ್ಷದ ಫೆಬ್ರವರಿಯಲ್ಲಿ ಈ ನಿಷೇಧಿತ ಡ್ರಗ್ ಅನ್ನು ಎರಡು ಚಮಚ ಸೇವಿಸಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದ್ದು, ಈ ವರದಿಯ ಆದಾರದ ಮೇಲೆ ಅವರಿಗೆ 3 ವರ್ಷಗಳ ನಿಷೇಧ ಹೆರಲಾಗಿದೆ. ಕಮಲಪ್ರೀತ್ ಮೇಲಿನ ನಿಷೇಧವು ಮಾರ್ಚ್ 29, 2022 ರಿಂದ ಜಾರಿಗೆ ಬರಲಿದೆ.

27 ಸೆಪ್ಟೆಂಬರ್ 2022 ರಂದು ಕಮಲ್‌ಪ್ರೀತ್ ತನ್ನ ಮೇಲಿನ ಡೋಪಿಂಗ್ ವಿರೋಧಿ ನಿಯಮದ ಉಲ್ಲಂಘನೆಯ ಆರೋಪವನ್ನು ಒಪ್ಪಿಕೊಂಡಿರುವುದರಿಂದ ಶಿಕ್ಷೆಯಲ್ಲಿ ಒಂದು ವರ್ಷ ವಿನಾಯಿತಿ ನೀಡಿ, 3 ವರ್ಷಗಳಿಗೆ ಸೀಮಿತಗೊಳಿಸಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

2 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

6 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

6 hours ago