ನಿಷ್ಠಾವಂತರಿಗೆ ಕಾಂಗ್ರೆಸ್​​ನಲ್ಲಿ ಯಾವುದೇ ಬೆಲೆ ಇಲ್ಲ : ರಮೇಶ್​​ ಜಾರಕಿಹೊಳಿ -Vishwanews24

Featured, ರಾಜ್ಯ ನ್ಯೂಸ್

ಬೆಳಗಾವಿ:ನಿಷ್ಠಾವಂತರಿಗೆ ಕಾಂಗ್ರೆಸ್​​ನಲ್ಲಿ ಯಾವುದೇ ಬೆಲೆ ಇಲ್ಲ ಎಂದು ರಮೇಶ್​​ ಜಾರಕಿಹೊಳಿ ಹೇಳಿದ್ದಾರೆ.

ಶುಕ್ರವಾರ ಗೋಕಾಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುವಾಗ ಭಾವುಕರಾದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್​ನಲ್ಲಿ ​ಬಾಗಿಲು ಕಾಯುವವರೇ ನಾಯಕ. ಬ್ಯಾಗ್​ ಹಿಡಿದು ಬಾಗಿಲು ಕಾಯುವವರಷ್ಟೇ ಲೀಡರ್. ಪಕ್ಷದಲ್ಲಿ ಮಾಸ್ ಲೀಡರ್​ಗಳಿಗೆ ಯಾವುದೇ ಬೆಲೆ ಇಲ್ಲ. ಸಿದ್ದರಾಮಯ್ಯ ಪಕ್ಷವನ್ನು ಕಪಿಮುಷ್ಠಿಯಲ್ಲಿಟ್ಟಿದ್ದಾರೆ. ಪಕ್ಷದಲ್ಲಿ ಏನೇ ಆದರೂ ಮಲ್ಲಿಕಾರ್ಜುನ ಖರ್ಗೆ ನೋಡಲ್ಲ. ಸಿದ್ದರಾಮಯ್ಯ ದರ್ಪದ ನಾಯಕ, ಡಿಕೆಶಿ ಪೋಸ್​ ಕೊಡೋ ಲೀಡರ್. ಮಲ್ಲಿಕಾರ್ಜುನ ಖರ್ಗೆ ಬ್ಲ್ಯಾಕ್​ಮೇಲ್​ ಮಾಡಲ್ಲ, ಧೈರ್ಯನೂ ಮಾಡಲ್ಲ.ಆದರೆ, ಸಿದ್ದರಾಮಯ್ಯ ಅವೆರಡನ್ನೂ ಮಾಡಿ ಮುಖ್ಯಮಂತ್ರಿ ಆದರು. ನಿಷ್ಠಾವಂತರಿಗೆ ಕಾಂಗ್ರೆಸ್​​ನಲ್ಲಿ ಯಾವುದೇ ಬೆಲೆ ಇಲ್ಲ ಎಂದು ರಮೇಶ್​​ ಜಾರಕಿಹೊಳಿ ಹೇಳಿದ್ದಾರೆ.

ಬಿಜೆಪಿ ಸೇರುವ ಹಿಂದಿನ ದಿನ ರಾತ್ರಿ ನಿದ್ದೆ ಬಂದಿರಲಿಲ್ಲ. ನಾನು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅಭಿಮಾನಿ. ನನ್ನ ದುಃಖ ಬಹಿರಂಗವಾಗಿ ಹೇಳುವ ಸ್ಥಿತಿಯಲ್ಲಿಲ್ಲ. ದುಃಖ ನುಂಗಿಕೊಳ್ಳಬೇಕಾದ ಅನಿವಾರ್ಯ ಸ್ಥಿತಿಯಿದೆ. ಕಾಂಗ್ರೆಸ್​​ನಲ್ಲೇ ಉಳಿದಿದ್ದರೆ ನಿರ್ನಾಮ ಮಾಡುತ್ತಿದ್ದರು ಎಂದು ಕಾಂಗ್ರೆಸ್ ಪಕ್ಷದ ಜತೆಗಿನ ನಂಟು ನೆನೆದು ರಮೇಶ್ ಜಾರಕಿಹೊಳಿ ಭಾವುಕರಾಗಿದ್ದಾರೆ.

ನಾನು ಮುಖ್ಯಮಂತ್ರಿ ಆಗೋ ಆಸೆ ಹೊಂದಿಲ್ಲ. ನನ್ನ ಲೆವಲ್​​​​​​ಗಿಂತ ನೂರು ಪಟ್ಟು ಬೆಳೆದಿದ್ದೇನೆ. ನನಗೆ ಯಾವುದೇ ಆಕಾಂಕ್ಷೆಯೂ ಇಲ್ಲ ಎಂದು ರಮೇಶ್​​​ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.