Featured

ನಿಷ್ಠಾವಂತರಿಗೆ ಕಾಂಗ್ರೆಸ್​​ನಲ್ಲಿ ಯಾವುದೇ ಬೆಲೆ ಇಲ್ಲ : ರಮೇಶ್​​ ಜಾರಕಿಹೊಳಿ -Vishwanews24

ಬೆಳಗಾವಿ:ನಿಷ್ಠಾವಂತರಿಗೆ ಕಾಂಗ್ರೆಸ್​​ನಲ್ಲಿ ಯಾವುದೇ ಬೆಲೆ ಇಲ್ಲ ಎಂದು ರಮೇಶ್​​ ಜಾರಕಿಹೊಳಿ ಹೇಳಿದ್ದಾರೆ.

ಶುಕ್ರವಾರ ಗೋಕಾಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುವಾಗ ಭಾವುಕರಾದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್​ನಲ್ಲಿ ​ಬಾಗಿಲು ಕಾಯುವವರೇ ನಾಯಕ. ಬ್ಯಾಗ್​ ಹಿಡಿದು ಬಾಗಿಲು ಕಾಯುವವರಷ್ಟೇ ಲೀಡರ್. ಪಕ್ಷದಲ್ಲಿ ಮಾಸ್ ಲೀಡರ್​ಗಳಿಗೆ ಯಾವುದೇ ಬೆಲೆ ಇಲ್ಲ. ಸಿದ್ದರಾಮಯ್ಯ ಪಕ್ಷವನ್ನು ಕಪಿಮುಷ್ಠಿಯಲ್ಲಿಟ್ಟಿದ್ದಾರೆ. ಪಕ್ಷದಲ್ಲಿ ಏನೇ ಆದರೂ ಮಲ್ಲಿಕಾರ್ಜುನ ಖರ್ಗೆ ನೋಡಲ್ಲ. ಸಿದ್ದರಾಮಯ್ಯ ದರ್ಪದ ನಾಯಕ, ಡಿಕೆಶಿ ಪೋಸ್​ ಕೊಡೋ ಲೀಡರ್. ಮಲ್ಲಿಕಾರ್ಜುನ ಖರ್ಗೆ ಬ್ಲ್ಯಾಕ್​ಮೇಲ್​ ಮಾಡಲ್ಲ, ಧೈರ್ಯನೂ ಮಾಡಲ್ಲ.ಆದರೆ, ಸಿದ್ದರಾಮಯ್ಯ ಅವೆರಡನ್ನೂ ಮಾಡಿ ಮುಖ್ಯಮಂತ್ರಿ ಆದರು. ನಿಷ್ಠಾವಂತರಿಗೆ ಕಾಂಗ್ರೆಸ್​​ನಲ್ಲಿ ಯಾವುದೇ ಬೆಲೆ ಇಲ್ಲ ಎಂದು ರಮೇಶ್​​ ಜಾರಕಿಹೊಳಿ ಹೇಳಿದ್ದಾರೆ.

ಬಿಜೆಪಿ ಸೇರುವ ಹಿಂದಿನ ದಿನ ರಾತ್ರಿ ನಿದ್ದೆ ಬಂದಿರಲಿಲ್ಲ. ನಾನು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅಭಿಮಾನಿ. ನನ್ನ ದುಃಖ ಬಹಿರಂಗವಾಗಿ ಹೇಳುವ ಸ್ಥಿತಿಯಲ್ಲಿಲ್ಲ. ದುಃಖ ನುಂಗಿಕೊಳ್ಳಬೇಕಾದ ಅನಿವಾರ್ಯ ಸ್ಥಿತಿಯಿದೆ. ಕಾಂಗ್ರೆಸ್​​ನಲ್ಲೇ ಉಳಿದಿದ್ದರೆ ನಿರ್ನಾಮ ಮಾಡುತ್ತಿದ್ದರು ಎಂದು ಕಾಂಗ್ರೆಸ್ ಪಕ್ಷದ ಜತೆಗಿನ ನಂಟು ನೆನೆದು ರಮೇಶ್ ಜಾರಕಿಹೊಳಿ ಭಾವುಕರಾಗಿದ್ದಾರೆ.

ನಾನು ಮುಖ್ಯಮಂತ್ರಿ ಆಗೋ ಆಸೆ ಹೊಂದಿಲ್ಲ. ನನ್ನ ಲೆವಲ್​​​​​​ಗಿಂತ ನೂರು ಪಟ್ಟು ಬೆಳೆದಿದ್ದೇನೆ. ನನಗೆ ಯಾವುದೇ ಆಕಾಂಕ್ಷೆಯೂ ಇಲ್ಲ ಎಂದು ರಮೇಶ್​​​ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…

3 minutes ago

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  – vishwanews24

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…

8 minutes ago

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…

14 minutes ago

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ – vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…

20 minutes ago

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

18 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

19 hours ago