Featured

ನಿಷ್ಠಾವಂತರಿಗೆ ಕಾಂಗ್ರೆಸ್​​ನಲ್ಲಿ ಯಾವುದೇ ಬೆಲೆ ಇಲ್ಲ : ರಮೇಶ್​​ ಜಾರಕಿಹೊಳಿ -Vishwanews24

ಬೆಳಗಾವಿ:ನಿಷ್ಠಾವಂತರಿಗೆ ಕಾಂಗ್ರೆಸ್​​ನಲ್ಲಿ ಯಾವುದೇ ಬೆಲೆ ಇಲ್ಲ ಎಂದು ರಮೇಶ್​​ ಜಾರಕಿಹೊಳಿ ಹೇಳಿದ್ದಾರೆ.

ಶುಕ್ರವಾರ ಗೋಕಾಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುವಾಗ ಭಾವುಕರಾದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್​ನಲ್ಲಿ ​ಬಾಗಿಲು ಕಾಯುವವರೇ ನಾಯಕ. ಬ್ಯಾಗ್​ ಹಿಡಿದು ಬಾಗಿಲು ಕಾಯುವವರಷ್ಟೇ ಲೀಡರ್. ಪಕ್ಷದಲ್ಲಿ ಮಾಸ್ ಲೀಡರ್​ಗಳಿಗೆ ಯಾವುದೇ ಬೆಲೆ ಇಲ್ಲ. ಸಿದ್ದರಾಮಯ್ಯ ಪಕ್ಷವನ್ನು ಕಪಿಮುಷ್ಠಿಯಲ್ಲಿಟ್ಟಿದ್ದಾರೆ. ಪಕ್ಷದಲ್ಲಿ ಏನೇ ಆದರೂ ಮಲ್ಲಿಕಾರ್ಜುನ ಖರ್ಗೆ ನೋಡಲ್ಲ. ಸಿದ್ದರಾಮಯ್ಯ ದರ್ಪದ ನಾಯಕ, ಡಿಕೆಶಿ ಪೋಸ್​ ಕೊಡೋ ಲೀಡರ್. ಮಲ್ಲಿಕಾರ್ಜುನ ಖರ್ಗೆ ಬ್ಲ್ಯಾಕ್​ಮೇಲ್​ ಮಾಡಲ್ಲ, ಧೈರ್ಯನೂ ಮಾಡಲ್ಲ.ಆದರೆ, ಸಿದ್ದರಾಮಯ್ಯ ಅವೆರಡನ್ನೂ ಮಾಡಿ ಮುಖ್ಯಮಂತ್ರಿ ಆದರು. ನಿಷ್ಠಾವಂತರಿಗೆ ಕಾಂಗ್ರೆಸ್​​ನಲ್ಲಿ ಯಾವುದೇ ಬೆಲೆ ಇಲ್ಲ ಎಂದು ರಮೇಶ್​​ ಜಾರಕಿಹೊಳಿ ಹೇಳಿದ್ದಾರೆ.

ಬಿಜೆಪಿ ಸೇರುವ ಹಿಂದಿನ ದಿನ ರಾತ್ರಿ ನಿದ್ದೆ ಬಂದಿರಲಿಲ್ಲ. ನಾನು ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅಭಿಮಾನಿ. ನನ್ನ ದುಃಖ ಬಹಿರಂಗವಾಗಿ ಹೇಳುವ ಸ್ಥಿತಿಯಲ್ಲಿಲ್ಲ. ದುಃಖ ನುಂಗಿಕೊಳ್ಳಬೇಕಾದ ಅನಿವಾರ್ಯ ಸ್ಥಿತಿಯಿದೆ. ಕಾಂಗ್ರೆಸ್​​ನಲ್ಲೇ ಉಳಿದಿದ್ದರೆ ನಿರ್ನಾಮ ಮಾಡುತ್ತಿದ್ದರು ಎಂದು ಕಾಂಗ್ರೆಸ್ ಪಕ್ಷದ ಜತೆಗಿನ ನಂಟು ನೆನೆದು ರಮೇಶ್ ಜಾರಕಿಹೊಳಿ ಭಾವುಕರಾಗಿದ್ದಾರೆ.

ನಾನು ಮುಖ್ಯಮಂತ್ರಿ ಆಗೋ ಆಸೆ ಹೊಂದಿಲ್ಲ. ನನ್ನ ಲೆವಲ್​​​​​​ಗಿಂತ ನೂರು ಪಟ್ಟು ಬೆಳೆದಿದ್ದೇನೆ. ನನಗೆ ಯಾವುದೇ ಆಕಾಂಕ್ಷೆಯೂ ಇಲ್ಲ ಎಂದು ರಮೇಶ್​​​ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

9 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

10 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

10 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

10 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

10 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

11 hours ago