Featured

ನಿಹಾಲ್ ತಾವ್ರೊ ರವರಿಗೆ ಮುಖ್ಯಮಂತ್ರಿಯಿಂದ ಸನ್ಮಾನಕ್ಕೆ ಮನವಿ : ಶಾಸಕ ರಘುಪತಿ ಭಟ್ ಸ್ಪಂದನೆ -Vishwanews24

ನಿಹಾಲ್ ತಾವ್ರೊ ರವರಿಗೆ ಮುಖ್ಯಮಂತ್ರಿಯಿಂದ ಸನ್ಮಾನಕ್ಕೆ ಮನವಿ : ಶಾಸಕ ರಘುಪತಿ ಭಟ್ ಸ್ಪಂದನೆ -Vishwanews24

ಕೆಪಿಸಿಸಿ ವತಿಯಿಂದಲೂ ಸನ್ಮಾನದ ಭರವಸೆ ..

ಉದ್ಯಾವರ : ಸೋನಿ ವಾಹಿನಿಯ ಪ್ರತಿಷ್ಠಿತ ಇಂಡಿಯನ್ ಐಡಲ್ ಸೀಸನ್ 12ರ ಸ್ಪರ್ಧೆಯಲ್ಲಿ 3 ಲಕ್ಷಕ್ಕೂ ಅಧಿಕ ಸ್ಪರ್ಧಿಗಳ ಸ್ಪರ್ಧೆಯಲ್ಲಿ ಫೈನಲ್ ಹಂತಕ್ಕೆ ತಲುಪಿ ಐದನೇ ಸ್ಥಾನ ಪಡೆದ ಕರ್ನಾಟಕದ ಏಕೈಕ ಸ್ಪರ್ಧಿ, ಮೂಡುಬಿದ್ರೆಯ ನಿಹಾಲ್ ತಾವ್ರೊ ರವರಿಗೆ ಇತ್ತೀಚೆಗೆ ಉದ್ಯಾವರದಲ್ಲಿ ನಿರಂತರ್ ಉದ್ಯಾವರ ಸಂಘಟನೆ ನೇತೃತ್ವದಲ್ಲಿ ಅಭಿನಂದನ ಸಮಾರಂಭ ಏರ್ಪಡಿಸಲಾಗಿತ್ತು.

ಕರ್ನಾಟಕದ ಹೆಸರನ್ನು ವಿಶ್ವದೆತ್ತರಕ್ಕೆ ತಲುಪಲು ತನ್ನ ಸಂಗೀತದ ಮೂಲಕ ಕಾರಣಕರ್ತರಾಗಿರುವ ನಿಹಾಲ್ ತಾವ್ರೊ ರವರನ್ನು ರಾಜ್ಯದ ಸಮಸ್ತ ಜನತೆಯ ಪರವಾಗಿ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸುವಂತೆ ಉಡುಪಿ ಶಾಸಕ ರಘುಪತಿ ಭಟ್ ರವರಲ್ಲಿ ನಿರಂತರ್ ಉದ್ಯಾವರ ಸಂಘಟನೆಯ ಪರವಾಗಿ ಅಧ್ಯಕ್ಷ ಸ್ಟೀವನ್ ಕುಲಾಸೊ ಮನವಿ ಮಾಡಿದ್ದರು. ಈ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕ ರಘುಪತಿ ಭಟ್, ಆದಷ್ಟು ಶೀಘ್ರ ಮುಖ್ಯಮಂತ್ರಿ ಬಳಿ ಮಾತನಾಡಿ ಸನ್ಮಾನಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಉಪಸ್ಥಿತರಿದ್ದ ಉದ್ಯಮಿ ರೊನಾಲ್ಡ್ ಮನೋಹರ್ ಕರ್ಕಡ, ಕೆಪಿಸಿಸಿ ವತಿಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಸನ್ಮಾನಿಸುವುದಾಗಿ ಸಂಘಟಕರಿಗೆ ಭರವಸೆ ನೀಡಿದ್ದೂ, ನಿಹಾಲ್ ರವರ ಉಪಸ್ಥಿತಿಯನ್ನು ಗಮನಿಸಿ ಕೆಪಿಸಿಸಿ ವತಿಯಿಂದ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಅ.ವಂ. ಸ್ಟಾನಿ ಬಿ ಲೋಬೋ, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಥೋಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷೆ ಮೇರಿ ಡಿಸೋಜ, ಲಯನ್ಸ್ ಜಿಲ್ಲಾ ದ್ವಿತೀಯ ಉಪಗವರ್ನರ್ ನೇರಿ ಕರ್ನೇಲಿಯೊ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಅಧ್ಯಕ್ಷ ಗೋಡ್ಫ್ರಿ ಡಿಸೋಜ, ಕಾರ್ಯದರ್ಶಿ ಮೈಕಲ್ ಡಿಸೋಜ, ನಿರಂತರ ಕಾರ್ಯದರ್ಶಿ ಒಲಿವೀರಾ ಮಥಾಯಸ್, ಐಸಿವೈಎಂ ಅಧ್ಯಕ್ಷ ರೋಯಲ್ ಕ್ಯಾಸ್ತಲಿನೊ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

15 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

15 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

15 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

18 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

18 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

19 hours ago