Featured

ನೀತಿಸಂಹಿತೆ ಉಲ್ಲಂಘನೆ : ಸಾರ್ವಜನಿಕರ ದೂರಿಗೆ ಕಾಯದೆ ಸ್ವಯಂಪ್ರೇರಿತ ಕೇಸು ದಾಖಲಿಸಿ :ಮಲ್ಲಿಕಾರ್ಜುನ ಉತ್ತರೆ – Vishwanews24

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆ ಅಥವಾ ಯಾವುದೇ ಅನಪೇಕ್ಷಿತ ಘಟನೆಗಳಿಗೆ ಸಂಬಂಧಿಸಿ ಸಾರ್ವಜನಿಕರ ದೂರಿಗೆ ಕಾಯದೆ, ಚುನಾವಣಾ ಸಿಬ್ಬಂದಿ ತಮ್ಮ ಗಮನಕ್ಕೆ ಬಂದ ತಕ್ಷ ಣ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗದ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ವೆಚ್ಚ ವೀಕ್ಷ ಕ ಮಲ್ಲಿಕಾರ್ಜುನ ಉತ್ತರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ಬುಧವಾರ ಸಭೆ ನಡೆಸಿದ ಅವರು, ಚುನಾವಣಾ ಪ್ರಚಾರದಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗದಂತೆ ನಿಗಾ ವಹಿಸಬೇಕು. ಪ್ರಮುಖವಾಗಿ ಮತದಾರರ ಮೇಲೆ ಪ್ರಭಾವ ಬೀರುವ ಚಟುವಟಿಕೆಗಳು ನಡೆಯದಂತೆ ಚುನಾವಣಾ ಕಾರ್ಯಗಳಿಗೆ ನಿಯೋಜಿತವಾದ ತಂಡಗಳು ಗಮನಹರಿಸಬೇಕು ಎಂದು ಸೂಚಿಸಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರವು ಎರಡು ಜಿಲ್ಲೆಗಳಲ್ಲಿ ಹರಡಿಕೊಂಡಿರುವುದರಿಂದ ಎರಡೂ ಜಿಲ್ಲೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಹಣ ಸಾಗಾಟ ಸೇರಿದಂತೆ ಅಕ್ರಮ ಚಟುವಟಿಕೆಗಳ ಮಾಹಿತಿಯನ್ನು ಪರಸ್ಪರರು ಹಂಚಿಕೊಂಡು ಅವುಗಳನ್ನು ತಡೆಗಟ್ಟಬೇಕು. ದಿನದ 24 ಗಂಟೆಗಳ ಕಾಲವೂ ಈ ವಿಷಯದಲ್ಲಿ ಯಾವುದೇ ಲೋಪಕ್ಕೆ ಆಸ್ಪದವಾಗದಂತೆ ನಿಗಾ ಇಡುವಂತೆ ಎಂದರು.

ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಮಾಹಿತಿ ನೀಡಿ, ಕ್ಷೇತ್ರದ ಎಲ್ಲ 1,837 ಮತಗಟ್ಟೆಗಳಲ್ಲಿಯೂ ಮೂಲಸೌಕರ್ಯ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದರು.

ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಚುನಾವಣಾ ತಹಸೀಲ್ದಾರ್‌ ಮುಹಮ್ಮದ್‌ ಇಸಾಕ್‌ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇರುವ ಮಾಧ್ಯಮ ಮೇಲ್ವಿಚಾರಣೆ ಸಮಿತಿ(ಎಂಸಿಎಂಸಿ) ಕೇಂದ್ರ, ಸಿವಿಜಿಲ್‌ ದೂರು ಕೋಶ, ಕಂಟ್ರೋಲ್‌ ರೂಂ ಮೊದಲಾದವುಗಳ ಕಾರ್ಯನಿರ್ವಹಣೆ ಪರಿಶೀಲಿಸಲಾಯಿತು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago