ಹಾಸನ: ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬಂದಿದ್ದರೂ ಚುನಾವಣಾ ಅಧಿಕಾರಿಗಳು ಕ್ರಮಕೈಗೊಳ್ಳದೇ ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು.
ಬಾಗೂರು ಮಂಜೇಗೌಡ ಅವರು ಹೊಳೆನರಸೀಪುರ ವಿಧಾನ ಕ್ಷೇತ್ರದಲ್ಲಿ ನಿರಂತರ ಬಾಡೂಟ ಆಯೋಜನೆ ಮಾಡುತ್ತಿದ್ದು, ಮತದಾರರಿಗೆ ಆಮಿಷ ಒಡುತ್ತಿದ್ದಾರೆ. ಈ ವಿಚಾರ ಗೊತ್ತಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಿಲ್ಲ ಏಕೆ? ಎಂದು ಪ್ರಶ್ನಿಸಿದರು.
‘ರಾಜ್ಯ ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್ಸ್ಪೆಕ್ಟರ್, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರೂ ಆಗಿರುವ ಮಂಜೇಗೌಡ, ತಮ್ಮ ಹುದ್ದೆಗೆ ಸಲ್ಲಿಸಿರುವ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳು ಕಾಂಗ್ರೆಸ್ನೊಂದಿಗೆ ಶಾಮೀಲಾಗಿದ್ದಾರೆ’ ಎಂದು ಆರೋಪಿಸಿದರು.
ಇದೇ ವೇಳೆ ಬಾಗೂರು ಮಂಜೇಗೌಡ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸುವಂತೆ ರೇವಣ್ಣ ಒತ್ತಾಯಿಸಿದರು.
‘ನಮ್ಮ ಪಕ್ಷದ ಸಮಾವೇಶಕ್ಕೆ ಸಾರಿಗೆ ಬಸ್ಗಳನ್ನು ನೀಡುತ್ತಿಲ್ಲ. ಆದರೆ ಬೆಂಗಳೂರಿನಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಸಮಾವೇಶಕ್ಕೆ ಸಾವಿರಾರು ಬಸ್ಗಳನ್ನು ನೀಡಲಾಗುತ್ತಿದೆ’ ಎಂದು ಕಿಡಿಕಾರಿದರು.
‘ಕಾಂಗ್ರೆಸ್ನವರಿಗೆ ಕುಮಾರಸ್ವಾಮಿಯನ್ನು ನೆನೆಯದೆ ಹೋದರೆ ನಿದ್ದೆ ಬರುವುದಿಲ್ಲ’ ಎಂದು ವ್ಯಂಗ್ಯವಾಡಿದರು.
ಕೆಲವೆಡೆ ಪೊಲೀಸ್ ವಾಹನಗಳಲ್ಲಿ ಹಣ ಸಾಗಣೆ ಮಾಡುವ ಹುನ್ನಾರ ನಡೆದಿದ್ದು, ಈ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕು ಎಂದು ಆಗ್ರಹಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…