ಹಾಸನ: ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬಂದಿದ್ದರೂ ಚುನಾವಣಾ ಅಧಿಕಾರಿಗಳು ಕ್ರಮಕೈಗೊಳ್ಳದೇ ಕಣ್ಮುಚ್ಚಿ ಕುಳಿತ್ತಿದ್ದಾರೆ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು.
ಬಾಗೂರು ಮಂಜೇಗೌಡ ಅವರು ಹೊಳೆನರಸೀಪುರ ವಿಧಾನ ಕ್ಷೇತ್ರದಲ್ಲಿ ನಿರಂತರ ಬಾಡೂಟ ಆಯೋಜನೆ ಮಾಡುತ್ತಿದ್ದು, ಮತದಾರರಿಗೆ ಆಮಿಷ ಒಡುತ್ತಿದ್ದಾರೆ. ಈ ವಿಚಾರ ಗೊತ್ತಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಿಲ್ಲ ಏಕೆ? ಎಂದು ಪ್ರಶ್ನಿಸಿದರು.
‘ರಾಜ್ಯ ಸಾರಿಗೆ ಇಲಾಖೆಯಲ್ಲಿ ಬ್ರೇಕ್ ಇನ್ಸ್ಪೆಕ್ಟರ್, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರೂ ಆಗಿರುವ ಮಂಜೇಗೌಡ, ತಮ್ಮ ಹುದ್ದೆಗೆ ಸಲ್ಲಿಸಿರುವ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಜಿಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳು ಕಾಂಗ್ರೆಸ್ನೊಂದಿಗೆ ಶಾಮೀಲಾಗಿದ್ದಾರೆ’ ಎಂದು ಆರೋಪಿಸಿದರು.
ಇದೇ ವೇಳೆ ಬಾಗೂರು ಮಂಜೇಗೌಡ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸುವಂತೆ ರೇವಣ್ಣ ಒತ್ತಾಯಿಸಿದರು.
‘ನಮ್ಮ ಪಕ್ಷದ ಸಮಾವೇಶಕ್ಕೆ ಸಾರಿಗೆ ಬಸ್ಗಳನ್ನು ನೀಡುತ್ತಿಲ್ಲ. ಆದರೆ ಬೆಂಗಳೂರಿನಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಸಮಾವೇಶಕ್ಕೆ ಸಾವಿರಾರು ಬಸ್ಗಳನ್ನು ನೀಡಲಾಗುತ್ತಿದೆ’ ಎಂದು ಕಿಡಿಕಾರಿದರು.
‘ಕಾಂಗ್ರೆಸ್ನವರಿಗೆ ಕುಮಾರಸ್ವಾಮಿಯನ್ನು ನೆನೆಯದೆ ಹೋದರೆ ನಿದ್ದೆ ಬರುವುದಿಲ್ಲ’ ಎಂದು ವ್ಯಂಗ್ಯವಾಡಿದರು.
ಕೆಲವೆಡೆ ಪೊಲೀಸ್ ವಾಹನಗಳಲ್ಲಿ ಹಣ ಸಾಗಣೆ ಮಾಡುವ ಹುನ್ನಾರ ನಡೆದಿದ್ದು, ಈ ಬಗ್ಗೆ ಚುನಾವಣಾ ಆಯೋಗ ಗಮನ ಹರಿಸಬೇಕು ಎಂದು ಆಗ್ರಹಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…