Featured

ನೀವು ಅರಮನೆಗೆ ಬರಬೇಕಿಲ್ಲ , ನಾನೂ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ : ಯದುವೀರ್ – Vishwanews24

ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ , ಸಾಮಾನ್ಯನಂತೆ ಕೆಲಸ ಮಾಡ್ತೀನಿ: ಯದುವೀರ್

ಮೈಸೂರು: ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿ ಆಗಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್  ಅವರು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಹಾಲಿ ಸಂಸದ ಪ್ರತಾಪ್ ಸಿಂಹ ಸಹ ಯದುವೀರ್ ಅವರೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಚುನಾವಣಾ ಪ್ರಚಾರ  ಸಂಬಂಧ ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಯದುವೀರ್ ಮಾತನಾಡಿದ್ದಾರೆ.

ನಮ್ಮ ತಂದೆ ನಾಲ್ಕು ಬಾರಿ ಸಂಸದರಾಗಿದ್ದರು. ನಮಗೆ ಎಲ್ಲ ಪಕ್ಷದವರೊಂದಿಗೆ ಸಂಬಂಧ ಇದೆ. ನನ್ನ ಪರಿಕಲ್ಪನೆಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಇದೆ. ಜನರಿಗೆ ಅರಮನೆ ಬಗ್ಗೆ ಭಾವನಾತ್ಮಕ ಸಂಬಂಧ ಇದೆ. ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನರು. ನಾನೂ ಸಹ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ. ಆಧುನಿಕ ತಂತ್ರಜ್ಞಾನದ ಮೂಲಕ ಸಂಪರ್ಕ ಇಟ್ಟುಕೊಳ್ಳಬಹುದು. ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ. ನಾನು ರಾಜ ಅಂತ ಇದನ್ನು ಹೇಳಿಲ್ಲ. ಅರಮನೆಗೆ ಒಂದು ಪರಂಪರೆ ಇದೆ. ಅದನ್ನು ಹೊರತುಪಡಿಸಿ ನಾನು ಸಾಮಾನ್ಯನಾಗಿ ಇರುತ್ತೇನೆ. ನನ್ನನ್ನು ಸಂಸದ, ಪ್ರತಿನಿಧಿ ಹೇಗೆ ಬೇಕಾದರೂ ಕರೆಯಿರಿ ಎಂದು ಹೇಳಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago