Featured

ನೀವು ಅರಮನೆಗೆ ಬರಬೇಕಿಲ್ಲ , ನಾನೂ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ : ಯದುವೀರ್ – Vishwanews24

ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ , ಸಾಮಾನ್ಯನಂತೆ ಕೆಲಸ ಮಾಡ್ತೀನಿ: ಯದುವೀರ್

ಮೈಸೂರು: ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿ ಆಗಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್  ಅವರು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಹಾಲಿ ಸಂಸದ ಪ್ರತಾಪ್ ಸಿಂಹ ಸಹ ಯದುವೀರ್ ಅವರೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಚುನಾವಣಾ ಪ್ರಚಾರ  ಸಂಬಂಧ ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಮಾಧ್ಯಮಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಯದುವೀರ್ ಮಾತನಾಡಿದ್ದಾರೆ.

ನಮ್ಮ ತಂದೆ ನಾಲ್ಕು ಬಾರಿ ಸಂಸದರಾಗಿದ್ದರು. ನಮಗೆ ಎಲ್ಲ ಪಕ್ಷದವರೊಂದಿಗೆ ಸಂಬಂಧ ಇದೆ. ನನ್ನ ಪರಿಕಲ್ಪನೆಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಇದೆ. ಜನರಿಗೆ ಅರಮನೆ ಬಗ್ಗೆ ಭಾವನಾತ್ಮಕ ಸಂಬಂಧ ಇದೆ. ಸಂವಿಧಾನದ ಅಡಿಯಲ್ಲಿ ಎಲ್ಲರೂ ಸಮಾನರು. ನಾನೂ ಸಹ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ. ಆಧುನಿಕ ತಂತ್ರಜ್ಞಾನದ ಮೂಲಕ ಸಂಪರ್ಕ ಇಟ್ಟುಕೊಳ್ಳಬಹುದು. ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ. ನಾನು ರಾಜ ಅಂತ ಇದನ್ನು ಹೇಳಿಲ್ಲ. ಅರಮನೆಗೆ ಒಂದು ಪರಂಪರೆ ಇದೆ. ಅದನ್ನು ಹೊರತುಪಡಿಸಿ ನಾನು ಸಾಮಾನ್ಯನಾಗಿ ಇರುತ್ತೇನೆ. ನನ್ನನ್ನು ಸಂಸದ, ಪ್ರತಿನಿಧಿ ಹೇಗೆ ಬೇಕಾದರೂ ಕರೆಯಿರಿ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago