ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರಿಗೆ ದೂರವಾಣಿ ಮೂಲಕ ಅಭಿನಂದನೆ ತಿಳಿಸಿದ್ದಾರೆ.
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ವಿಜಯ್ ಅವರಿಗೆ ದೂರವಾಣಿ ಕರೆ ಮಾಡಿದ ಸಿದ್ದರಾಮಯ್ಯ ಅವರು, “ನೀವು ಇತಿಹಾಸ ನಿರ್ಮಿಸಿದ್ದೀರಿ” ಎಂದು ಶ್ಲಾಘಿಸಿದರು. ಜೊತೆಗೆ “ಬೆಂಗಳೂರಿಗೆ ಯಾವಾಗ ಬರುತ್ತೀರಿ?” ಎಂದು ಆತ್ಮೀಯವಾಗಿ ಪ್ರಶ್ನಿಸಿ, ಆಹ್ವಾನವನ್ನೂ ನೀಡಿದ್ದಾರೆ.
ಇದನ್ನೂ ಓದಿ :
ಚಿತ್ರರಂಗದಿಂದ ರಾಜಕೀಯಕ್ಕೆ ಬಂದ ವಿಜಯ್, ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜಕೀಯ ನಾಯಕರು ಹಾಗೂ ಅಭಿಮಾನಿಗಳಿಂದ ವಿಜಯ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಇದಲ್ಲದೆ, ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲೂ ಶುಭಕೋರಿರುವ ಸಿದ್ದರಾಮಯ್ಯ ಅವರು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಆಳವಾದ ನಾಗರಿಕ ಸಂಬಂಧಗಳು ಹಾಗೂ ಸಾಂಸ್ಕೃತಿಕ ಸಾಮ್ಯತೆಯನ್ನು ಹಂಚಿಕೊಂಡಿವೆ. ಎರಡು ರಾಜ್ಯಗಳು ಸಾಮಾಜಿಕ ನ್ಯಾಯ, ಒಳಗೊಳ್ಳುವ ಬೆಳವಣಿಗೆ ಮತ್ತು ಒಕ್ಕೂಟ ಸಹಕಾರಕ್ಕಾಗಿ ಸಮಾನ ಆಕಾಂಕ್ಷೆಗಳನ್ನು ಹೊಂದಿವೆ. ಉಭಯ ರಾಜ್ಯಗಳ ನಡುವಿನ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಪಾರಂಪರಿಕ ಮೌಲ್ಯಗಳನ್ನು ಎತ್ತಿಹಿಡಿಯಲು ವಿಜಯ್ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ :
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…