ಹೈದರಾಬಾದ್, : ”ಬಿಜೆಪಿ ಮಸೀದಿಗಳನ್ನು ನಾಶಪಡಿಸುತ್ತದೆ, ಆದರೆ ನಾವು ಮಂದಿರಕ್ಕಾಗಿ 10 ಕೋಟಿ ಸಂಗ್ರಹಿಸುತ್ತಿದ್ದೇವೆ” ಎಂದು ಎಐಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಮುಂಬರುವ ಜಿಎಚ್ಎಂಸಿ ಚುನಾವಣೆಗೆ ಎಐಐಐಎಂ ಪರ ಪ್ರಚಾರ ನಡೆಸಿ ಅಜಂಪುರಾದ ಫರ್ಹತ್ ನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಓವೈಸಿ, ಬಿಜೆಪಿಯ ವಿರುದ್ದ ವಾಗ್ದಾಳಿ ನಡೆಸಿದ್ದು ”ಬಿಜೆಪಿ ಪಕ್ಷವು ದೇಶದಲ್ಲಿ ದ್ವೇಷವನ್ನು ಉತ್ತೇಜಿಸುತ್ತದೆ. ಆದರೆ ನಾವು ಎಲ್ಲರನ್ನು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ” ಎಂದರು.
“ಇದು ನಿಮ್ಮ ಮತ್ತು ನಮ್ಮ ನಡುವಿನ ವ್ಯತ್ಯಾಸ. ನೀವು ಧ್ವಂಸ ಮಾಡುವ ಬಗ್ಗೆ ಮಾತನಾಡುತ್ತೀರಿ ಮತ್ತು ನಾವು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ” ಎಂದು ಬಿಜೆಪಿಯನ್ನು ಟೀಕಿಸಿದರು.
ರಾಮ ಜನ್ಮಭೂಮಿ ಚಳುವಳಿ ಹಾಗೂ ಬಾಬ್ರಿ ಮಸೀದಿ ಧ್ವಂಸದ ವಿಚಾರವಾಗಿ ಸೂಕ್ಷ್ಮ ಉಲ್ಲೇಖ ಮಾಡಿದ ಅವರು, ”ತೆಲಂಗಾಣ ವಿಧಾನಸಭೆಯಲ್ಲಿ ಎಐಎಂಐಎಂ ನಾಯಕ ಅಕ್ಬರುದ್ದೀನ್ ಒವೈಸಿ ದೇವಸ್ಥಾನವೊಂದಕ್ಕೆ 10 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದಾರೆ. ಆ ಸಂದರ್ಭ ಮುಖ್ಯಮಂತ್ರಿ ಆಘಾತಕ್ಕೊಳಗಾಗಿದ್ದಾರೆ. ಎಲ್ಲಾ ಧರ್ಮದ ಜನರು ಇಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರು ತಮ್ಮ ಧರ್ಮವನ್ನು ಅನುಸರಿಸಬೇಕೆಂದು ನಾವು ಬಯಸುತ್ತೇವೆ. 1980 ಮತ್ತು 1990 ರ ಪರಿಸ್ಥಿತಿಯನ್ನು ಇಲ್ಲಿ ಪುನರಾವರ್ತಿಸಲು ನಾನು ಆಸ್ಪದ ನೀಡಲಾರೆವು” ಎಂದು ಹೇಳಿದರು.
“ನಾನು ಮಕ್ಕಳ ಮನಸ್ಸನ್ನು ಹಾಳುಮಾಡಲು ಬಯಸುವುದಿಲ್ಲ ಆದರೆ ಬಿಜೆಪಿ ದ್ವೇಷವನ್ನು ಉತ್ತೇಜಿಸಲು ಬಯಸಿದೆ” ಎಂದು ಓವೈಸಿ ಬಿಜೆಪಿಯನ್ನು ದೂರಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…