ಹೈದರಾಬಾದ್, : ”ಬಿಜೆಪಿ ಮಸೀದಿಗಳನ್ನು ನಾಶಪಡಿಸುತ್ತದೆ, ಆದರೆ ನಾವು ಮಂದಿರಕ್ಕಾಗಿ 10 ಕೋಟಿ ಸಂಗ್ರಹಿಸುತ್ತಿದ್ದೇವೆ” ಎಂದು ಎಐಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
ಮುಂಬರುವ ಜಿಎಚ್ಎಂಸಿ ಚುನಾವಣೆಗೆ ಎಐಐಐಎಂ ಪರ ಪ್ರಚಾರ ನಡೆಸಿ ಅಜಂಪುರಾದ ಫರ್ಹತ್ ನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಓವೈಸಿ, ಬಿಜೆಪಿಯ ವಿರುದ್ದ ವಾಗ್ದಾಳಿ ನಡೆಸಿದ್ದು ”ಬಿಜೆಪಿ ಪಕ್ಷವು ದೇಶದಲ್ಲಿ ದ್ವೇಷವನ್ನು ಉತ್ತೇಜಿಸುತ್ತದೆ. ಆದರೆ ನಾವು ಎಲ್ಲರನ್ನು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ” ಎಂದರು.
“ಇದು ನಿಮ್ಮ ಮತ್ತು ನಮ್ಮ ನಡುವಿನ ವ್ಯತ್ಯಾಸ. ನೀವು ಧ್ವಂಸ ಮಾಡುವ ಬಗ್ಗೆ ಮಾತನಾಡುತ್ತೀರಿ ಮತ್ತು ನಾವು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ” ಎಂದು ಬಿಜೆಪಿಯನ್ನು ಟೀಕಿಸಿದರು.
ರಾಮ ಜನ್ಮಭೂಮಿ ಚಳುವಳಿ ಹಾಗೂ ಬಾಬ್ರಿ ಮಸೀದಿ ಧ್ವಂಸದ ವಿಚಾರವಾಗಿ ಸೂಕ್ಷ್ಮ ಉಲ್ಲೇಖ ಮಾಡಿದ ಅವರು, ”ತೆಲಂಗಾಣ ವಿಧಾನಸಭೆಯಲ್ಲಿ ಎಐಎಂಐಎಂ ನಾಯಕ ಅಕ್ಬರುದ್ದೀನ್ ಒವೈಸಿ ದೇವಸ್ಥಾನವೊಂದಕ್ಕೆ 10 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದಾರೆ. ಆ ಸಂದರ್ಭ ಮುಖ್ಯಮಂತ್ರಿ ಆಘಾತಕ್ಕೊಳಗಾಗಿದ್ದಾರೆ. ಎಲ್ಲಾ ಧರ್ಮದ ಜನರು ಇಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರು ತಮ್ಮ ಧರ್ಮವನ್ನು ಅನುಸರಿಸಬೇಕೆಂದು ನಾವು ಬಯಸುತ್ತೇವೆ. 1980 ಮತ್ತು 1990 ರ ಪರಿಸ್ಥಿತಿಯನ್ನು ಇಲ್ಲಿ ಪುನರಾವರ್ತಿಸಲು ನಾನು ಆಸ್ಪದ ನೀಡಲಾರೆವು” ಎಂದು ಹೇಳಿದರು.
“ನಾನು ಮಕ್ಕಳ ಮನಸ್ಸನ್ನು ಹಾಳುಮಾಡಲು ಬಯಸುವುದಿಲ್ಲ ಆದರೆ ಬಿಜೆಪಿ ದ್ವೇಷವನ್ನು ಉತ್ತೇಜಿಸಲು ಬಯಸಿದೆ” ಎಂದು ಓವೈಸಿ ಬಿಜೆಪಿಯನ್ನು ದೂರಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…