Featured

ನೀವು ಧ್ವಂಸ ಮಾಡುವ ಬಗ್ಗೆ ಮಾತನಾಡುತ್ತೀರಿ ಮತ್ತು ನಾವು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ : ಬಿಜೆಪಿಯನ್ನು ಟೀಕಿಸಿದ ಓವೈಸಿ -Vishwanews24

ನೀವು ಧ್ವಂಸ ಮಾಡುವ ಬಗ್ಗೆ ಮಾತನಾಡುತ್ತೀರಿ ಮತ್ತು ನಾವು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ : ಬಿಜೆಪಿಯನ್ನು ಟೀಕಿಸಿದ ಓವೈಸಿ -Vishwanews24

ಹೈದರಾಬಾದ್, : ”ಬಿಜೆಪಿ ಮಸೀದಿಗಳನ್ನು ನಾಶಪಡಿಸುತ್ತದೆ, ಆದರೆ ನಾವು ಮಂದಿರಕ್ಕಾಗಿ 10 ಕೋಟಿ ಸಂಗ್ರಹಿಸುತ್ತಿದ್ದೇವೆ” ಎಂದು ಎಐಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಹೇಳಿದ್ದಾರೆ.

ಮುಂಬರುವ ಜಿಎಚ್‌ಎಂಸಿ ಚುನಾವಣೆಗೆ ಎಐಐಐಎಂ ಪರ ಪ್ರಚಾರ ನಡೆಸಿ ಅಜಂಪುರಾದ ಫರ್ಹತ್ ನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಓವೈಸಿ, ಬಿಜೆಪಿಯ ವಿರುದ್ದ ವಾಗ್ದಾಳಿ ನಡೆಸಿದ್ದು ”ಬಿಜೆಪಿ ಪಕ್ಷವು ದೇಶದಲ್ಲಿ ದ್ವೇಷವನ್ನು ಉತ್ತೇಜಿಸುತ್ತದೆ. ಆದರೆ ನಾವು ಎಲ್ಲರನ್ನು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ” ಎಂದರು.

“ಇದು ನಿಮ್ಮ ಮತ್ತು ನಮ್ಮ ನಡುವಿನ ವ್ಯತ್ಯಾಸ. ನೀವು ಧ್ವಂಸ ಮಾಡುವ ಬಗ್ಗೆ ಮಾತನಾಡುತ್ತೀರಿ ಮತ್ತು ನಾವು ಒಗ್ಗೂಡಿಸುವ ಬಗ್ಗೆ ಮಾತನಾಡುತ್ತೇವೆ” ಎಂದು ಬಿಜೆಪಿಯನ್ನು ಟೀಕಿಸಿದರು.

ರಾಮ ಜನ್ಮಭೂಮಿ ಚಳುವಳಿ ಹಾಗೂ ಬಾಬ್ರಿ ಮಸೀದಿ ಧ್ವಂಸದ ವಿಚಾರವಾಗಿ ಸೂಕ್ಷ್ಮ ಉಲ್ಲೇಖ ಮಾಡಿದ ಅವರು, ”ತೆಲಂಗಾಣ ವಿಧಾನಸಭೆಯಲ್ಲಿ ಎಐಎಂಐಎಂ ನಾಯಕ ಅಕ್ಬರುದ್ದೀನ್ ಒವೈಸಿ ದೇವಸ್ಥಾನವೊಂದಕ್ಕೆ 10 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದಾರೆ. ಆ ಸಂದರ್ಭ ಮುಖ್ಯಮಂತ್ರಿ ಆಘಾತಕ್ಕೊಳಗಾಗಿದ್ದಾರೆ. ಎಲ್ಲಾ ಧರ್ಮದ ಜನರು ಇಲ್ಲಿ ವಾಸಿಸುತ್ತಿದ್ದಾರೆ ಮತ್ತು ಅವರು ತಮ್ಮ ಧರ್ಮವನ್ನು ಅನುಸರಿಸಬೇಕೆಂದು ನಾವು ಬಯಸುತ್ತೇವೆ. 1980 ಮತ್ತು 1990 ರ ಪರಿಸ್ಥಿತಿಯನ್ನು ಇಲ್ಲಿ ಪುನರಾವರ್ತಿಸಲು ನಾನು ಆಸ್ಪದ ನೀಡಲಾರೆವು” ಎಂದು ಹೇಳಿದರು.

“ನಾನು ಮಕ್ಕಳ ಮನಸ್ಸನ್ನು ಹಾಳುಮಾಡಲು ಬಯಸುವುದಿಲ್ಲ ಆದರೆ ಬಿಜೆಪಿ ದ್ವೇಷವನ್ನು ಉತ್ತೇಜಿಸಲು ಬಯಸಿದೆ” ಎಂದು ಓವೈಸಿ ಬಿಜೆಪಿಯನ್ನು ದೂರಿದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago