ಛತ್ತೀಸಗಢ : ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ.
ಭಾರತದ ‘ಆಪರೇಷನ್ ಸಿಂಧೂರ’ ನಂತರ, ಮೇ 9 ಮತ್ತು 10 ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಂಪುರವೂ ಸೇರಿತ್ತು. ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ. ನಿಮ್ಮ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಅವರು ಸೈನಿಕರ ಗುಣಗಾನ ಮಾಡಿದರು.
ನಮ್ಮ ಸಶಸ್ತ್ರ ಪಡೆಗಳು ನಮ್ಮ ರಾಷ್ಟ್ರಕ್ಕಾಗಿ ಮಾಡುವ ಎಲ್ಲದಕ್ಕೂ ಭಾರತವು ಅವರಿಗೆ ಶಾಶ್ವತವಾಗಿ ಕೃತಜ್ಞರಾಗಿರಬೇಕು” ಎಂದು ಪ್ರಧಾನಿ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ ಮತ್ತು ಅವರೊಂದಿಗೆ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಕಳೆದ ತಿಂಗಳು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಮೇ 7 ರಂದು ಪ್ರಾರಂಭಿಸಲಾದ ಯಶಸ್ವಿ ‘ಆಪರೇಷನ್ ಸಿಂಧೂರ’ ನಂತರ ದೇಶದ ಬಲಿಷ್ಠ ಸಶಸ್ತ್ರ ಪಡೆಗಳಿಗೆ ನಮನ ಸಲ್ಲಿಸಿದ ನಂತರ ಪ್ರಧಾನಿಯವರು ವಾಯುಪಡೆ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ.
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…
ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…
ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…