ನೀವು ರಾಜ್ಯವನ್ನು ನಿಭಾಯಿಸಿದ ರೀತಿಗೆ ಮಹಾರಾಷ್ಟ್ರ ಜನತೆ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆಂಬ ಭರವಸೆ ನನಗಿದೆ: ಠಾಕ್ರೆ ಪರ ಪ್ರಕಾಶ್‌ ರಾಜ್‌  – Vishwanews24

Featured, ರಾಜ್ಯ ನ್ಯೂಸ್

ನೀವು ರಾಜ್ಯವನ್ನು ನಿಭಾಯಿಸಿದ ರೀತಿಗೆ ಮಹಾರಾಷ್ಟ್ರ ಜನತೆ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆಂಬ ಭರವಸೆ ನನಗಿದೆ: ಠಾಕ್ರೆ ಪರ ಪ್ರಕಾಶ್‌ ರಾಜ್‌ 

ಬೆಂಗಳೂರು: ಮಹಾರಾಷ್ಟ್ರ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್‌ ಠಾಕ್ರೆ ರಾಜೀನಾಮೆ ನೀಡಿದ್ದನ್ನು ನಟ ಪ್ರಕಾಶ್‌ ರಾಜ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಕಾಶ್‌ ರಾಜ್‌, ನೀವು ಒಳ್ಳೆಯ ಕೆಲಸ ಮಾಡಿದ್ದೀರಿ ಉದ್ಧವ್‌ ಠಾಕ್ರೆ ಸರ್.‌ ನೀವು ರಾಜ್ಯವನ್ನು ನಿಭಾಯಿಸಿದ ರೀತಿಗೆ ಮಹಾರಾಷ್ಟ್ರದ ಜನರು ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬ ಭರವಸೆ ನನಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಚಾಣಕ್ಯರು (ಅಮಿತ್‌ ಶಾ) ಇಂದು ಲಡ್ಡುಗಳನ್ನು ತಿನ್ನಬಹುದು. ಆದರೆ ನಿಮ್ಮ ಪ್ರಾಮಾಣಿಕತೆ ಹೆಚ್ಚು ಕಾಲ ಉಳಿಯುತ್ತದೆ. ನಿಮಗೆ ಹೆಚ್ಚು ಶಕ್ತಿಯನ್ನೂ ನೀಡಲಿದೆ ಎಂದು ಠಾಕ್ರೆ ನಿಲುವನ್ನು ಸ್ವಾಗತಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜೊತೆಗಿನ ಮೈತ್ರಿ ವಿರುದ್ಧ ಏಕನಾಥ್‌ ಶಿಂಧೆ ನೇತೃತ್ವದಲ್ಲಿ ಶಿವಸೇನಾ ಶಾಸಕರು ಬಂಡಾಯ ಎದ್ದಿದ್ದಾರೆ. ಶಿಂಧೆ ಬಣದಲ್ಲಿ ಶಿವಸೇನಾ ಬಂಡಾಯ ಶಾಸಕರು 40 ಮಂದಿ ಇದ್ದಾರೆ ಎನ್ನಲಾಗಿದೆ. ಪಕ್ಷೇತರರು ಸೇರಿ 50 ಬಂಡಾಯ ಶಾಸಕರಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಉದ್ಧವ್‌ ಠಾಕ್ರೆಗೆ ರಾಜ್ಯಪಾಲರು ನಿನ್ನೆ ಸೂಚನೆ ನೀಡಿದ್ದರು. ರಾಜ್ಯಪಾಲರ ಸೂಚನೆ ವಿರುದ್ಧ ಠಾಕ್ರೆ ಸುಪ್ರೀಂ ಮೊರೆ ಹೋಗಿದ್ದರು. ಆದರೆ ಬಹುಮತ ಸಾಬೀತು ಸೂಚನೆಯನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿಯಿತು. ಬೇರೆ ದಾರಿಯಿಲ್ಲದೇ ಠಾಕ್ರೆ ಅವರು ನಿನ್ನೆ ರಾತ್ರಿ ರಾಜೀನಾಮೆ ನೀಡಿದ್ದಾರೆ.‌

ಮಂಗಳೂರು : ಜಿಲ್ಲೆಯಾದ್ಯಾಂತ ಧಾರಾಕಾರ ಮಳೆ ; ತಗ್ಗು ಪ್ರದೇಶ ಜಲಾವೃತ್ತ – Vishwanews24

Leave a Reply