ಬೆಂಗಳೂರು: ಮಹಾರಾಷ್ಟ್ರ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದನ್ನು ನಟ ಪ್ರಕಾಶ್ ರಾಜ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ನೀವು ಒಳ್ಳೆಯ ಕೆಲಸ ಮಾಡಿದ್ದೀರಿ ಉದ್ಧವ್ ಠಾಕ್ರೆ ಸರ್. ನೀವು ರಾಜ್ಯವನ್ನು ನಿಭಾಯಿಸಿದ ರೀತಿಗೆ ಮಹಾರಾಷ್ಟ್ರದ ಜನರು ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬ ಭರವಸೆ ನನಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಚಾಣಕ್ಯರು (ಅಮಿತ್ ಶಾ) ಇಂದು ಲಡ್ಡುಗಳನ್ನು ತಿನ್ನಬಹುದು. ಆದರೆ ನಿಮ್ಮ ಪ್ರಾಮಾಣಿಕತೆ ಹೆಚ್ಚು ಕಾಲ ಉಳಿಯುತ್ತದೆ. ನಿಮಗೆ ಹೆಚ್ಚು ಶಕ್ತಿಯನ್ನೂ ನೀಡಲಿದೆ ಎಂದು ಠಾಕ್ರೆ ನಿಲುವನ್ನು ಸ್ವಾಗತಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಎನ್ಸಿಪಿ ಮತ್ತು ಕಾಂಗ್ರೆಸ್ ಜೊತೆಗಿನ ಮೈತ್ರಿ ವಿರುದ್ಧ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನಾ ಶಾಸಕರು ಬಂಡಾಯ ಎದ್ದಿದ್ದಾರೆ. ಶಿಂಧೆ ಬಣದಲ್ಲಿ ಶಿವಸೇನಾ ಬಂಡಾಯ ಶಾಸಕರು 40 ಮಂದಿ ಇದ್ದಾರೆ ಎನ್ನಲಾಗಿದೆ. ಪಕ್ಷೇತರರು ಸೇರಿ 50 ಬಂಡಾಯ ಶಾಸಕರಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆಗೆ ರಾಜ್ಯಪಾಲರು ನಿನ್ನೆ ಸೂಚನೆ ನೀಡಿದ್ದರು. ರಾಜ್ಯಪಾಲರ ಸೂಚನೆ ವಿರುದ್ಧ ಠಾಕ್ರೆ ಸುಪ್ರೀಂ ಮೊರೆ ಹೋಗಿದ್ದರು. ಆದರೆ ಬಹುಮತ ಸಾಬೀತು ಸೂಚನೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯಿತು. ಬೇರೆ ದಾರಿಯಿಲ್ಲದೇ ಠಾಕ್ರೆ ಅವರು ನಿನ್ನೆ ರಾತ್ರಿ ರಾಜೀನಾಮೆ ನೀಡಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…