ಬೆಂಗಳೂರು: ರಾಜ್ಯದ ಜನತೆಗೆ ನನ್ನ ಕಡೆಯಿಂದ ಹಾಗೂ ಕಾಂಗ್ರೆಸ್ ಪಕ್ಷದಿಂದ ಧನ್ಯವಾದ. ಇನ್ನೇನು ಕೆಲ ಗಂಟೆಗಳಲ್ಲಿ ನೂತನ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರಂಟಿ ಅನುಮೋದನೆ ಆಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಶ್ವಾಸನೆ ನೀಡಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಭಾಷಣ ಮಾಡಿದ ರಾಹುಲ್ ಗಾಂಧಿ, “ಭಾರತ್ ಜೋಡೋ ಯಾತ್ರೆಯಿಂದ ದ್ವೇಷ ಸೋತಿದೆ, ಪ್ರೀತಿ ಗೆದ್ದಿದೆ. ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ನೀಡಿತ್ತು. ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವನಿಧಿ ಗ್ಯಾರಂಟಿಗಳನ್ನು ನಾವು ನೀಡಿದ್ದೆವು, ಎಲ್ಲವನ್ನೂ ಈಡೇರಿಸುತ್ತೇವೆ” ಎಂದು ಹೇಳಿದ್ದಾರೆ
“ಕೆಲವೇ ಹೊತ್ತಿನಲ್ಲಿ ನೂತನ ಸರ್ಕಾರ ಸಂಪುಟ ಸಭೆ ನಡೆಯಲಿದೆ. ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಗ್ಯಾರಂಟಿಗಳು ಅನುಮೋದನೆ ಆಗಲಿದೆ. ಜನರು ಪ್ರೀತಿ, ಶಕ್ತಿ ಕಾಂಗ್ರೆಸ್ಗೆ ನೀಡಿದ್ದನ್ನು ಮರೆಯಲು ಸಾಧ್ಯವಿಲ್ಲ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…