Featured

ನುಸುಳುಕೋರರಿಗೆ ಕಾದಿದೆ ಲೇಸರ್ ಶಾಕ್,ಭಾರತ- ಪಾಕಿಸ್ತಾನ ಗಡಿ: ‘ಸ್ಮಾರ್ಟ್ ಬೇಲಿ’ ಇಂದು ಅನಾವರಣ, ಮೋದಿ ಕಾರ್ಯಕ್ಕೆ ಬೇ‍ಷ್ ಎಂದ ದೇಶ.

ನವದೆಹಲಿ: ಭಾರತ- ಪಾಕಿಸ್ತಾನ ಗಡಿಯಲ್ಲಿ ನಿರ್ಮಿಸಲಾಗಿರುವ ದೇಶದ ಮೊದಲ ‘ಸ್ಮಾರ್ಟ್‌ ಬೇಲಿ’ಯನ್ನು ಗೃಹಸಚಿವ ರಾಜನಾಥ್‌ ಸಿಂಗ್ ಅವರು ಸೋಮವಾರ ಅನಾವರಣಗೊಳಿಸಲಿದ್ದಾರೆ.

ತಲಾ 5 ಕಿ.ಮೀ ವ್ಯಾಪ್ತಿಯಲ್ಲಿನ ಈ ಬೇಲಿ ಲೇಸರ್ ಚಾಲಿತ ತಂತ್ರಜ್ಞಾನವನ್ನು ಒಳಗೊಂಡಿದೆ. ಅರೆಸೇನಾ ಪಡೆಯು ಇದನ್ನು ಕಾರ್ಯಗತಗೊಳಿಸಿದೆ. ಜಮ್ಮುವಿನ ಮುಂಚೂಣಿ ‍ಪ್ರದೇಶದಲ್ಲಿ ರಾಜನಾಥ್‌ ಸಿಂಗ್ ಅವರು ಈ ಬೇಲಿಯನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಎಸ್‌ಎಫ್‌ನ ಹಿರಿಯ ಅಧಿಕಾರಿಗಳು ಬೇಲಿಗೆ ಚಾಲನೆ ನೀಡುವುದು ಮತ್ತು ಅದರ ಪ್ರತಿಕ್ರಿಯಾ ಕಾರ್ಯತಂತ್ರದ ಪ್ರಾತ್ಯಕ್ಷಿಕೆಯನ್ನು ಗೃಹಸಚಿವರಿಗೆ ತೋರಿಸಲಿದ್ದಾರೆ.ಕಣ್ಗಾವಲು, ಸಂವಹನ ಮತ್ತು ದತ್ತಾಂಶ ಸಂಗ್ರಹಕ್ಕಾಗಿ ಸ್ಮಾರ್ಟ್‌ ಬೇಲಿಯಲ್ಲಿ ಸಾಕಷ್ಟು ಉಪಕರಣಗಳನ್ನು ಅಳವಡಿಸಲಾಗಿದೆ.

ದಿನದ 24 ಗಂಟೆ ಕಣ್ಗಾವಲು ನಡೆಸುವ ಈ ಬೇಲಿಯನ್ನು ದೂಳಿನ ಮಾರುತ, ಮಂಜು ಅಥವಾ ಮಳೆ ಹೀಗೆ ಯಾವುದೇ ಹವಾಮಾನದಲ್ಲೂ ಕೆಲಸ ಮಾಡುವಂತೆ ನಿರ್ಮಿಸಲಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

14 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

14 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

14 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

15 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 hours ago