ನವದೆಹಲಿ: ಭಾರತ- ಪಾಕಿಸ್ತಾನ ಗಡಿಯಲ್ಲಿ ನಿರ್ಮಿಸಲಾಗಿರುವ ದೇಶದ ಮೊದಲ ‘ಸ್ಮಾರ್ಟ್ ಬೇಲಿ’ಯನ್ನು ಗೃಹಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಅನಾವರಣಗೊಳಿಸಲಿದ್ದಾರೆ.
ತಲಾ 5 ಕಿ.ಮೀ ವ್ಯಾಪ್ತಿಯಲ್ಲಿನ ಈ ಬೇಲಿ ಲೇಸರ್ ಚಾಲಿತ ತಂತ್ರಜ್ಞಾನವನ್ನು ಒಳಗೊಂಡಿದೆ. ಅರೆಸೇನಾ ಪಡೆಯು ಇದನ್ನು ಕಾರ್ಯಗತಗೊಳಿಸಿದೆ. ಜಮ್ಮುವಿನ ಮುಂಚೂಣಿ ಪ್ರದೇಶದಲ್ಲಿ ರಾಜನಾಥ್ ಸಿಂಗ್ ಅವರು ಈ ಬೇಲಿಯನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಎಸ್ಎಫ್ನ ಹಿರಿಯ ಅಧಿಕಾರಿಗಳು ಬೇಲಿಗೆ ಚಾಲನೆ ನೀಡುವುದು ಮತ್ತು ಅದರ ಪ್ರತಿಕ್ರಿಯಾ ಕಾರ್ಯತಂತ್ರದ ಪ್ರಾತ್ಯಕ್ಷಿಕೆಯನ್ನು ಗೃಹಸಚಿವರಿಗೆ ತೋರಿಸಲಿದ್ದಾರೆ.ಕಣ್ಗಾವಲು, ಸಂವಹನ ಮತ್ತು ದತ್ತಾಂಶ ಸಂಗ್ರಹಕ್ಕಾಗಿ ಸ್ಮಾರ್ಟ್ ಬೇಲಿಯಲ್ಲಿ ಸಾಕಷ್ಟು ಉಪಕರಣಗಳನ್ನು ಅಳವಡಿಸಲಾಗಿದೆ.
ದಿನದ 24 ಗಂಟೆ ಕಣ್ಗಾವಲು ನಡೆಸುವ ಈ ಬೇಲಿಯನ್ನು ದೂಳಿನ ಮಾರುತ, ಮಂಜು ಅಥವಾ ಮಳೆ ಹೀಗೆ ಯಾವುದೇ ಹವಾಮಾನದಲ್ಲೂ ಕೆಲಸ ಮಾಡುವಂತೆ ನಿರ್ಮಿಸಲಾಗಿದೆ.
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ…