(ನ್ಯೂಸ್ ಕಡಬ) newskadaba.com ಕಡಬ, ಮಾ.18. ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ದಲಿತ ಕಾಲೋನಿಯಲ್ಲಿ 2017-18ನೇ ಸಾಲಿನಲ್ಲಿ ಮಾಡಿದ ರಸ್ತೆ ಡಾಮರೀಕರಣವು ಸಂಪೂರ್ಣ ಕೆಟ್ಟುಹೋಗಿದ್ದು ಕಳಪೆ ಕಾಮಗಾರಿ ಎಂದು ಕಾಲೋನಿ ನಿವಾಸಿಗಳು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಯು ರಸ್ತೆಯನ್ನು ಮರು ಡಾಮರೀಕರಣಗೊಳಿಸಿದ ಘಟನೆ ಶನಿವಾರದಂದು ನಡೆದಿದೆ.
ಕಳೆದ ಮಾ.01 ರಂದು ದಲಿತ ಸಂಘರ್ಷ ಸಮಿತಿ ಕಡಬ ತಾಲೂಕು ಸಂಚಾಲಕ ವಸಂತ ಕುಬಲಾಡಿಯವರ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿ ಪತ್ರಿಕಾಗೋಷ್ಟಿ ಕರೆದಿದ್ದರು. ಈ ಬಗ್ಗೆ ಗಮನ ಹರಿಸಿದ ಪಿಡಬ್ಲ್ಯುಡಿ ಇಲಾಖೆಯು ಕುಬಲಾಡಿ ದಲಿತ ಕಾಲೋನಿ ಮರು ಡಾಮರೀಕರಣಗೊಳಿಸಿ ಸಂಪೂರ್ಣ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಯೋಗ್ಯ ರಸ್ತೆಯನ್ನಾಗಿಸಿದೆ. ಈ ನಿಟ್ಟಿನಲ್ಲಿ ಪ್ರತಿಭಟನೆಯನ್ನು ಕೈಬಿಡಲಾಗಿದೆ ಎಂದು ಕಡಬ ತಾ.ಸಂಚಾಲಕ ವಸಂತ ಕುಬಲಾಡಿಯವರು ತಿಳಿಸಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…