(ನ್ಯೂಸ್ ಕಡಬ) newskadaba.com ಕಡಬ, ಮಾ.18. ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ದಲಿತ ಕಾಲೋನಿಯಲ್ಲಿ 2017-18ನೇ ಸಾಲಿನಲ್ಲಿ ಮಾಡಿದ ರಸ್ತೆ ಡಾಮರೀಕರಣವು ಸಂಪೂರ್ಣ ಕೆಟ್ಟುಹೋಗಿದ್ದು ಕಳಪೆ ಕಾಮಗಾರಿ ಎಂದು ಕಾಲೋನಿ ನಿವಾಸಿಗಳು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಯು ರಸ್ತೆಯನ್ನು ಮರು ಡಾಮರೀಕರಣಗೊಳಿಸಿದ ಘಟನೆ ಶನಿವಾರದಂದು ನಡೆದಿದೆ.
ಕಳೆದ ಮಾ.01 ರಂದು ದಲಿತ ಸಂಘರ್ಷ ಸಮಿತಿ ಕಡಬ ತಾಲೂಕು ಸಂಚಾಲಕ ವಸಂತ ಕುಬಲಾಡಿಯವರ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿ ಪತ್ರಿಕಾಗೋಷ್ಟಿ ಕರೆದಿದ್ದರು. ಈ ಬಗ್ಗೆ ಗಮನ ಹರಿಸಿದ ಪಿಡಬ್ಲ್ಯುಡಿ ಇಲಾಖೆಯು ಕುಬಲಾಡಿ ದಲಿತ ಕಾಲೋನಿ ಮರು ಡಾಮರೀಕರಣಗೊಳಿಸಿ ಸಂಪೂರ್ಣ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಯೋಗ್ಯ ರಸ್ತೆಯನ್ನಾಗಿಸಿದೆ. ಈ ನಿಟ್ಟಿನಲ್ಲಿ ಪ್ರತಿಭಟನೆಯನ್ನು ಕೈಬಿಡಲಾಗಿದೆ ಎಂದು ಕಡಬ ತಾ.ಸಂಚಾಲಕ ವಸಂತ ಕುಬಲಾಡಿಯವರು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…