(ನ್ಯೂಸ್ ಕಡಬ) newskadaba.com ಕಡಬ, ಮಾ.18. ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ದಲಿತ ಕಾಲೋನಿಯಲ್ಲಿ 2017-18ನೇ ಸಾಲಿನಲ್ಲಿ ಮಾಡಿದ ರಸ್ತೆ ಡಾಮರೀಕರಣವು ಸಂಪೂರ್ಣ ಕೆಟ್ಟುಹೋಗಿದ್ದು ಕಳಪೆ ಕಾಮಗಾರಿ ಎಂದು ಕಾಲೋನಿ ನಿವಾಸಿಗಳು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಯು ರಸ್ತೆಯನ್ನು ಮರು ಡಾಮರೀಕರಣಗೊಳಿಸಿದ ಘಟನೆ ಶನಿವಾರದಂದು ನಡೆದಿದೆ.
ಕಳೆದ ಮಾ.01 ರಂದು ದಲಿತ ಸಂಘರ್ಷ ಸಮಿತಿ ಕಡಬ ತಾಲೂಕು ಸಂಚಾಲಕ ವಸಂತ ಕುಬಲಾಡಿಯವರ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾಗಿ ಪತ್ರಿಕಾಗೋಷ್ಟಿ ಕರೆದಿದ್ದರು. ಈ ಬಗ್ಗೆ ಗಮನ ಹರಿಸಿದ ಪಿಡಬ್ಲ್ಯುಡಿ ಇಲಾಖೆಯು ಕುಬಲಾಡಿ ದಲಿತ ಕಾಲೋನಿ ಮರು ಡಾಮರೀಕರಣಗೊಳಿಸಿ ಸಂಪೂರ್ಣ ದುರಸ್ಥಿಗೊಳಿಸಿ ಸಾರ್ವಜನಿಕರಿಗೆ ಯೋಗ್ಯ ರಸ್ತೆಯನ್ನಾಗಿಸಿದೆ. ಈ ನಿಟ್ಟಿನಲ್ಲಿ ಪ್ರತಿಭಟನೆಯನ್ನು ಕೈಬಿಡಲಾಗಿದೆ ಎಂದು ಕಡಬ ತಾ.ಸಂಚಾಲಕ ವಸಂತ ಕುಬಲಾಡಿಯವರು ತಿಳಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…