Featured

ನೂತನ ಗಿನ್ನೆಸ್‌ ವಿಶ್ವ ದಾಖಲೆ ನಿರ್ಮಿಸಿದ ಯೋಗಿ ಆದಿತ್ಯನಾಥರ ಅಯೋಧ್ಯೆ ದೀಪೋತ್ಸವ..

ಇಲ್ಲಿನ ಸರಯೂ ನದಿ ದಂಡೆ ಮೇಲಿರುವ ‘ರಾಮ್‌ ಕೀ ಪೈದಿ’ಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ದೀಪೋತ್ಸವದಲ್ಲಿ 1,87,213 ಮಣ್ಣಿನ ಹಣತೆ ಬೆಳಗುವ ಮೂಲಕ ಗಿನ್ನೆಸ್‌ ವಿಶ್ವದಾಖಲೆ ನಿರ್ಮಿಸಲಾಗಿದೆ..

ಅಯೋಧ್ಯೆ: ಮಂಗಳವಾರ ದೀಪಾವಳಿಯ ಪ್ರಯುಕ್ತ ಉತ್ತರ ಪ್ರದೇಶದ ಪುಣ್ಯಕ್ಷೇತ್ರ ಅಯೋಧ್ಯೆಯಲ್ಲಿ ಮೂರು ಲಕ್ಷ ಹಣತೆಗಳನ್ನು ಬೆಳಗುವ ಮೂಲಕ ನೂತನ ವಿಶ್ವ ದಾಖಲೆ ನಿರ್ಮಿಸಲಾಯಿತು.

ಸರಯೂ ನದಿತಟದಲ್ಲಿ ಮೂರು ಲಕ್ಷ ಮಣ್ಣಿನ ಹಣತೆಗಳನ್ನು ಏಕ ಕಾಲದಲ್ಲಿ ಬೆಳಗಿಸುವ ಮೂಲಕ ದಾಖಲೆ ನಿರ್ಮಾಣವಾಯಿತು. ಗಿನ್ನಿಸ್‌ ವಿಶ್ವ ದಾಖಲೆಗಳ ಪರವಾಗಿ ಹಾಜರಿದ್ದ ಅಧಿಕಾರಿ ರಿಶಿ ನಾಥ್‌, ’ದೀಪೋತ್ಸವ’ ಸಂದರ್ಭದಲ್ಲಿ ನೂತನ ದಾಖಲೆ ನಿರ್ಮಾಣವಾಗಿರುವುದನ್ನು ಘೋಷಿಸಿದರು..

ಗಿನ್ನೆಸ್‌ ಟೀಮ್‌ನವರು ಆಮೂಲಾಗ್ರ ಪರಿಶೀಲನೆ ನಡೆಸಿ ಪ್ರಮಾಣ ಪತ್ರ ನೀಡಿದ ಬಳಿಕ ದಾಖಲೆ ಅಧಿಕೃತಗೊಳ್ಳಲಿದೆ. ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಗುಜರಾತ್‌ ಮೂಲದ ‘ಇಮ್ಯಾಜಿನೇಷನ್‌’ ಈವೆಂಟ್‌ ಮ್ಯಾನೇಜ್‌ಮೆಂಟ್‌ ಕಂಪನಿ ಈ ಕಾರ್ಯಕ್ರಮ ಆಯೋಜಿಸಿತ್ತು.

ಐದು ನಿಮಿಷಗಳಲ್ಲಿ ಒಟ್ಟು 3,01,152 ದೀಪಗಳನ್ನು ಬೆಳಗಲಾಗಿದೆ. ನದಿ ನಟದಲ್ಲಿನ ’ರಾಮ್‌ ಕಿ ಪೈಡಿ’ಯ ಎರಡೂ ಬದಿಗಳಲ್ಲಿ 3.35 ಲಕ್ಷ ದೀಪಗಳನ್ನು ಹಚ್ಚುವ ಗುರಿ ಹೊಂದಲಾಗಿತ್ತು. 2016ರಲ್ಲಿ ಹರಿಯಾಣದಲ್ಲಿ ನಿಗದಿತ ಸಮಯದಲ್ಲಿ 1,50,009 ದೀಪಗಳನ್ನು ಬೆಳಗಿಸಿದ್ದು ಈವರೆಗಿನ ದಾಖಲೆಯಾಗಿತ್ತು.

ಈ ದಾಖಲೆ ಇದಕ್ಕೂ ಮೊದಲು ಹರಿಯಾಣ ರಾಜ್ಯದ ಪಂಚಕುಲದ ಡೇರಾ ಸಚ್ಚಾ ಸೌಧಾ ಸಂಸ್ಥೆಯ ಹೆಸರಲ್ಲಿತ್ತು.ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಾಬಾ ಗುರ್ಮೀತ್‌ ರಾಮ್‌ ರಹೀಂ ಸಿಂಗ್‌ನ ಡೇರಾ ಸಂಸ್ಥೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ 1,50,009 ಹಣತೆ ಹಚ್ಚಿ ದಾಖಲೆಗೆ ಭಾಜನವಾಗಿತ್ತು.

ಫೈಸಲಾಬಾದ್ ಇನ್ನು ಮುಂದೆ ಅಯೋಧ್ಯೆ
ಈ ದೀಪೋತ್ಸವ ಸಂದರ್ಭದಲ್ಲಿ ಕೆಲವು ಬಹು ಮುಖ್ಯ ಘೋಷಣೆಗಳನ್ನೂ ಸಹ ಹೊರಡಿಸಲಾಗಿದೆ. ಫೈಸಲಾಬಾದ್ ಜಿಲ್ಲೆಯು ಇನ್ನು ಮುಂದೆ ಅಯೋಧ್ಯೆ ಎಂಬ ಹೆಸರಿನಿಂದ ಗುರುತಿಸಲ್ಪಡುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಅಯೋಧ್ಯೆ ನಮ್ಮ ಸ್ವಾಭಿಮಾನ ಮತ್ತು ಹೆಮ್ಮೆಯ ಸಂಕೇತ. ಅಯೋಧ್ಯೆ ಶ್ರೀರಾಮ ಅವತರಿಸಿದ ಪುಣ್ಯಭೂಮಿ. ಇನ್ನು ಮುಂದೆ ಫೈಸಲಾಬಾದ್ ಅಯೋಧ್ಯೆ ಎಂದು ಕರೆಯಲ್ಪಡುತ್ತದೆ ಎಂದು ಅವರು ತಿಳಿಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago