Featured

ನೂತನ ಗಿನ್ನೆಸ್‌ ವಿಶ್ವ ದಾಖಲೆ ನಿರ್ಮಿಸಿದ ಯೋಗಿ ಆದಿತ್ಯನಾಥರ ಅಯೋಧ್ಯೆ ದೀಪೋತ್ಸವ..

ಇಲ್ಲಿನ ಸರಯೂ ನದಿ ದಂಡೆ ಮೇಲಿರುವ ‘ರಾಮ್‌ ಕೀ ಪೈದಿ’ಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ದೀಪೋತ್ಸವದಲ್ಲಿ 1,87,213 ಮಣ್ಣಿನ ಹಣತೆ ಬೆಳಗುವ ಮೂಲಕ ಗಿನ್ನೆಸ್‌ ವಿಶ್ವದಾಖಲೆ ನಿರ್ಮಿಸಲಾಗಿದೆ..

ಅಯೋಧ್ಯೆ: ಮಂಗಳವಾರ ದೀಪಾವಳಿಯ ಪ್ರಯುಕ್ತ ಉತ್ತರ ಪ್ರದೇಶದ ಪುಣ್ಯಕ್ಷೇತ್ರ ಅಯೋಧ್ಯೆಯಲ್ಲಿ ಮೂರು ಲಕ್ಷ ಹಣತೆಗಳನ್ನು ಬೆಳಗುವ ಮೂಲಕ ನೂತನ ವಿಶ್ವ ದಾಖಲೆ ನಿರ್ಮಿಸಲಾಯಿತು.

ಸರಯೂ ನದಿತಟದಲ್ಲಿ ಮೂರು ಲಕ್ಷ ಮಣ್ಣಿನ ಹಣತೆಗಳನ್ನು ಏಕ ಕಾಲದಲ್ಲಿ ಬೆಳಗಿಸುವ ಮೂಲಕ ದಾಖಲೆ ನಿರ್ಮಾಣವಾಯಿತು. ಗಿನ್ನಿಸ್‌ ವಿಶ್ವ ದಾಖಲೆಗಳ ಪರವಾಗಿ ಹಾಜರಿದ್ದ ಅಧಿಕಾರಿ ರಿಶಿ ನಾಥ್‌, ’ದೀಪೋತ್ಸವ’ ಸಂದರ್ಭದಲ್ಲಿ ನೂತನ ದಾಖಲೆ ನಿರ್ಮಾಣವಾಗಿರುವುದನ್ನು ಘೋಷಿಸಿದರು..

ಗಿನ್ನೆಸ್‌ ಟೀಮ್‌ನವರು ಆಮೂಲಾಗ್ರ ಪರಿಶೀಲನೆ ನಡೆಸಿ ಪ್ರಮಾಣ ಪತ್ರ ನೀಡಿದ ಬಳಿಕ ದಾಖಲೆ ಅಧಿಕೃತಗೊಳ್ಳಲಿದೆ. ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಗುಜರಾತ್‌ ಮೂಲದ ‘ಇಮ್ಯಾಜಿನೇಷನ್‌’ ಈವೆಂಟ್‌ ಮ್ಯಾನೇಜ್‌ಮೆಂಟ್‌ ಕಂಪನಿ ಈ ಕಾರ್ಯಕ್ರಮ ಆಯೋಜಿಸಿತ್ತು.

ಐದು ನಿಮಿಷಗಳಲ್ಲಿ ಒಟ್ಟು 3,01,152 ದೀಪಗಳನ್ನು ಬೆಳಗಲಾಗಿದೆ. ನದಿ ನಟದಲ್ಲಿನ ’ರಾಮ್‌ ಕಿ ಪೈಡಿ’ಯ ಎರಡೂ ಬದಿಗಳಲ್ಲಿ 3.35 ಲಕ್ಷ ದೀಪಗಳನ್ನು ಹಚ್ಚುವ ಗುರಿ ಹೊಂದಲಾಗಿತ್ತು. 2016ರಲ್ಲಿ ಹರಿಯಾಣದಲ್ಲಿ ನಿಗದಿತ ಸಮಯದಲ್ಲಿ 1,50,009 ದೀಪಗಳನ್ನು ಬೆಳಗಿಸಿದ್ದು ಈವರೆಗಿನ ದಾಖಲೆಯಾಗಿತ್ತು.

ಈ ದಾಖಲೆ ಇದಕ್ಕೂ ಮೊದಲು ಹರಿಯಾಣ ರಾಜ್ಯದ ಪಂಚಕುಲದ ಡೇರಾ ಸಚ್ಚಾ ಸೌಧಾ ಸಂಸ್ಥೆಯ ಹೆಸರಲ್ಲಿತ್ತು.ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಾಬಾ ಗುರ್ಮೀತ್‌ ರಾಮ್‌ ರಹೀಂ ಸಿಂಗ್‌ನ ಡೇರಾ ಸಂಸ್ಥೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ 1,50,009 ಹಣತೆ ಹಚ್ಚಿ ದಾಖಲೆಗೆ ಭಾಜನವಾಗಿತ್ತು.

ಫೈಸಲಾಬಾದ್ ಇನ್ನು ಮುಂದೆ ಅಯೋಧ್ಯೆ
ಈ ದೀಪೋತ್ಸವ ಸಂದರ್ಭದಲ್ಲಿ ಕೆಲವು ಬಹು ಮುಖ್ಯ ಘೋಷಣೆಗಳನ್ನೂ ಸಹ ಹೊರಡಿಸಲಾಗಿದೆ. ಫೈಸಲಾಬಾದ್ ಜಿಲ್ಲೆಯು ಇನ್ನು ಮುಂದೆ ಅಯೋಧ್ಯೆ ಎಂಬ ಹೆಸರಿನಿಂದ ಗುರುತಿಸಲ್ಪಡುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. ಅಯೋಧ್ಯೆ ನಮ್ಮ ಸ್ವಾಭಿಮಾನ ಮತ್ತು ಹೆಮ್ಮೆಯ ಸಂಕೇತ. ಅಯೋಧ್ಯೆ ಶ್ರೀರಾಮ ಅವತರಿಸಿದ ಪುಣ್ಯಭೂಮಿ. ಇನ್ನು ಮುಂದೆ ಫೈಸಲಾಬಾದ್ ಅಯೋಧ್ಯೆ ಎಂದು ಕರೆಯಲ್ಪಡುತ್ತದೆ ಎಂದು ಅವರು ತಿಳಿಸಿದರು.

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

15 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

18 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

18 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

19 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

19 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

19 hours ago