Featured

ನೂತನ ರೂಪಾಂತರಿತ ಕೋವಿಡ್ : ಬ್ರಿಟನ್ ವಿಮಾನಗಳಿಗೆ ಜನವರಿ 7ರವರೆಗೆ ನಿರ್ಬಂಧ -Vishwanews24

ರೂಪಾಂತರಿ ಕೋವಿಡ್ : ಬ್ರಿಟನ್ ವಿಮಾನಗಳಿಗೆ ಜನವರಿ 7ರವರೆಗೆ ನಿರ್ಬಂಧ -Vishwanews24

ನವದೆಹಲಿ: ನೂತನ ರೂಪಾಂತರಿತ ಕೋವಿಡ್ ವೈರಸ್ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬ್ರಿಟನ್ ನಿಂದ ಭಾರತಕ್ಕೆ ಆಗಮಿಸುವ ವಿಮಾನ ಸಂಚಾರದ ನಿಷೇಧವನ್ನು ಜನವರಿ 7ರವರೆಗೆ ವಿಸ್ತರಿಸಿರುವುದಾಗಿ ಬುಧವಾರ(ಡಿಸೆಂಬರ್ 30, 2020) ಕೇಂದ್ರ ಸರ್ಕಾರ ತಿಳಿಸಿದೆ.

ಭಾರತದಿಂದ ಬ್ರಿಟನ್ ಗೆ ಸಂಚರಿಸುವ ವಿಮಾನ ಯಾನವನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದ ದಿನಾಂಕವನ್ನು ಇದೀಗ ಜನವರಿಗೆ (2021) 7ರವರೆಗೆ ವಿಸ್ತರಿಸಲು ನಿರ್ಧಾರ ತೆಗೆದುಕೊಂಡಿರುವುದಾಗಿ ಭಾರತ ಸರ್ಕಾರ ಹೇಳಿದೆ.

ಬ್ರಿಟನ್ ನಲ್ಲಿ ರೂಪಾಂತರಿತ ಕೋವಿಡ್ ವೈರಸ್ ಪತ್ತೆಯಾದ ನಂತರ ಭಾರತ ಡಿಸೆಂಬರ್ 23ರಿಂದ 31ರವರೆಗೆ ಬ್ರಿಟನ್ ವಿಮಾನ ಸಂಚಾರವನ್ನು ನಿಷೇಧಿಸಿತ್ತು.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಬ್ರಿಟನ್ ನಿಂದ ಭಾರತಕ್ಕೆ ಆಗಮಿಸಿದ್ದ 20 ಮಂದಿಗೆ ನೂತನ ರೂಪಾಂತರಿತ ಕೋವಿಡ್ ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದೆ. ಮಂಗಳವಾರ ಆರು ಮಂದಿಯಲ್ಲಿ ನೂತನ ಕೋವಿಡ್ ಸೋಂಕು ಪತ್ತೆಯಾಗಿದ್ದು, ಅವರನ್ನು ಐಸೋಲೇಶನ್ ನಲ್ಲಿ ಇರಿಸಲಾಗಿದ್ದು, ಅವರ ಸಂಪರ್ಕಕ್ಕೆ ಬಂದಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ.

ಅಲ್ಲದೇ ಬ್ರಿಟನ್ ನಿಂದ ಆಗಮಿಸಿದ್ದವರ ಸಹ ಪ್ರಯಾಣಿಕರು, ಕುಟುಂಬದ ಸಂಪರ್ಕಿತರು ಹಾಗೂ ಇತರರನ್ನು ಕೂಡಾ ಪತ್ತೆ ಹಚ್ಚಲಾಗುತ್ತಿದೆ. ನೂತನ ರೂಪಾಂತರಿತ ಕೋವಿಡ್ ಸೋಂಕಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

6 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago