ಶಿವಮೊಗ್ಗ: ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವುದು ಬೇಡ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಆದರೆ, ತವರು ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದನ್ನು ಯಡಿಯೂರಪ್ಪ ಅವರು ತಿರಸ್ಕರಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭಾನುವಾರ ಪತ್ರ ಬರೆದಿರುವ ಬಿಎಸ್ ವೈ, ಶಿವಮೊಗ್ಗ ಜಿಲ್ಲೆಯಲ್ಲಿ ಬಹುದಿನಗಳ ಕನಸಾದ ವಿಮಾನ ನಿಲ್ದಾಣವು ಈಗ ನನಸಾಗುತ್ತಿರುವುದಕ್ಕೆ ಬೊಮ್ಮಾಯಿ ಅವರಿಗೆ ಧನ್ಯವಾದ ಅರ್ಪಿಸಿದ್ದು, ಹೊಸ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವ ಬಗ್ಗೆ ಘೋಷಿಸಿರುವುದನ್ನು ಪ್ರಸ್ತಾಪಿಸಿದ್ದಾರೆ.
‘ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶ ಭಕ್ತರಿದ್ದಾರೆ. ಅವರ ಕೊಡುಗೆಗಳ ಮುಂದೆ ನನ್ನದೊಂದು ಅಳಿಲು ಸೇವೆ ಮಾತ್ರ..ಈ ಹಿನ್ನೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ. ರಾಷ್ಟ್ರ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿರುವ ಮಹನೀಯರ ಹೆಸರನ್ನು ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕು ಎಂದು ಬಿಎಸ್ ಯಡಿಯೂರಪ್ಪ ಅವರು ಪತ್ರ ಮುಖೇನ ಮನವಿ ಮಾಡಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…