Featured

ನೂತನ ಸಂಸತ್ ಕಟ್ಟಡಕ್ಕೆ ಶಂಕುಸ್ಥಾಪನೆ : ಪ್ರಜಾಪ್ರಭುತ್ವದಲ್ಲಿ ಇಂದು ಐತಿಹಾಸಿಕ ದಿನ : ಪ್ರಧಾನಿ ನರೇಂದ್ರ ಮೋದಿ -Vishwanews24

ನೂತನ ಸಂಸತ್ ಕಟ್ಟಡಕ್ಕೆ ಶಂಕುಸ್ಥಾಪನೆ : ಪ್ರಜಾಪ್ರಭುತ್ವದಲ್ಲಿ ಇಂದು ಐತಿಹಾಸಿಕ ದಿನ : ಪ್ರಧಾನಿ ನರೇಂದ್ರ ಮೋದಿ -Vishwanews24

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ನೂತನ ಸಂಸತ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುಉದ್ದೇಶಿಸಿ ಮಾತನಾಡಿ, ಇಂದು ಐತಿಹಾಸಿಕ ದಿನವಾಗಿದೆ ಎಂಬುದಾಗಿ ಹೇಳಿದರು.

‘ಸಂಸತ್ ಭವನದ ಶಂಕುಸ್ಥಾಪನೆ ನೆರವೇರಿಸಿ ಇಂದು ಐತಿಹಾಸಿಕ ದಿನವಾಗಿದೆ. ಭಾರತದ ಜನತೆ ಸೇರಿ ಸಂಸತ್ತಿನ ಈ ಹೊಸ ಕಟ್ಟಡವನ್ನು ನಿರ್ಮಿಸುತ್ತೇವೆ’ ಎಂದು ಅವರು ಹೇಳಿದರು.

‘ಈ ಐತಿಹಾಸಿಕ ಕ್ಷಣವನ್ನು ನಾವು ನೋಡುತ್ತಿರುವಾಗ 130 ಕೋಟಿ ಭಾರತೀಯರ ಹೆಮ್ಮೆಯ ದಿನ. ಹೊಸ ಸಂಸತ್ ಕಟ್ಟಡವು ಹೊಸ ಮತ್ತು ಹಳೆಯ ಸಹಜೀವನಕ್ಕೆ ಒಂದು ಉದಾಹರಣೆಯಾಗಿದೆ. ಇದು ಸಮಯ ಮತ್ತು ಅಗತ್ಯಗಳಿಗೆ ಅನುಗುಣವಾಗಿ ತನ್ನೊಳಗೆ ಬದಲಾವಣೆಗಳನ್ನು ಮಾಡಿಕೊಳ್ಳುವ ಪ್ರಯತ್ನವಾಗಿದೆ’ ಎಂದು ಅವರು ಹೇಳಿದರು.

ಅಂದಹಾಗೇ, ರಾಷ್ಟ್ರಪತಿಗಳ ಅರಮನೆ ರಾಷ್ಟ್ರಪತಿ ಭವನದಿಂದ ಐಕಾನಿಕ್ ಯುದ್ಧ ಸ್ಮಾರಕ ಇಂಡಿಯಾ ಗೇಟ್ ವರೆಗೆ 3 ಕಿ.ಮೀ.ರಾಜಪಥ್ ನ ಭಾಗವಾಗಿರುವ ಸರ್ಕಾರಿ ಕಟ್ಟಡಗಳನ್ನು ನಿರ್ಮಾಣ ಮತ್ತು ನವೀಕರಿಸುವ ಗುರಿಹೊಂದಿರುವ ₹ 20,000 ಕೋಟಿ ವೆಚ್ಚದ ಸೆಂಟ್ರಲ್ ವಿಸ್ಟಾ ಯೋಜನೆಯ ಮುಖ್ಯ ಭಾಗ ನೂತನ ಸಂಸತ್ ಭವನ ನಿರ್ಮಾಣವಾಗುತ್ತಿದೆ.

ಪ್ರಸ್ತಾವಿತ ನಾಲ್ಕು ಅಂತಸ್ತಿನ ಕಟ್ಟಡವು 64,500 ಚದರ ಮೀಟರ್ ವಿಸ್ತೀರ್ಣದಲ್ಲಿ ವಿಸ್ತಾರವಾಗಿದ್ದು, ಅಂದಾಜು ₹ 971 ಕೋಟಿ ವೆಚ್ಚವಾಗಲಿದೆ. 2022ರ ಆಗಸ್ಟ್ ನಲ್ಲಿ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಈ ಕಟ್ಟಡ ನಿರ್ಮಾಣ ಕಾರ್ಯ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

3 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

12 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

12 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

13 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago