Featured

ನೂತನ ಸಂಸತ್ ಕಟ್ಟಡಕ್ಕೆ ಶಂಕುಸ್ಥಾಪನೆ : ಪ್ರಜಾಪ್ರಭುತ್ವದಲ್ಲಿ ಇಂದು ಐತಿಹಾಸಿಕ ದಿನ : ಪ್ರಧಾನಿ ನರೇಂದ್ರ ಮೋದಿ -Vishwanews24

ನೂತನ ಸಂಸತ್ ಕಟ್ಟಡಕ್ಕೆ ಶಂಕುಸ್ಥಾಪನೆ : ಪ್ರಜಾಪ್ರಭುತ್ವದಲ್ಲಿ ಇಂದು ಐತಿಹಾಸಿಕ ದಿನ : ಪ್ರಧಾನಿ ನರೇಂದ್ರ ಮೋದಿ -Vishwanews24

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ನೂತನ ಸಂಸತ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುಉದ್ದೇಶಿಸಿ ಮಾತನಾಡಿ, ಇಂದು ಐತಿಹಾಸಿಕ ದಿನವಾಗಿದೆ ಎಂಬುದಾಗಿ ಹೇಳಿದರು.

‘ಸಂಸತ್ ಭವನದ ಶಂಕುಸ್ಥಾಪನೆ ನೆರವೇರಿಸಿ ಇಂದು ಐತಿಹಾಸಿಕ ದಿನವಾಗಿದೆ. ಭಾರತದ ಜನತೆ ಸೇರಿ ಸಂಸತ್ತಿನ ಈ ಹೊಸ ಕಟ್ಟಡವನ್ನು ನಿರ್ಮಿಸುತ್ತೇವೆ’ ಎಂದು ಅವರು ಹೇಳಿದರು.

‘ಈ ಐತಿಹಾಸಿಕ ಕ್ಷಣವನ್ನು ನಾವು ನೋಡುತ್ತಿರುವಾಗ 130 ಕೋಟಿ ಭಾರತೀಯರ ಹೆಮ್ಮೆಯ ದಿನ. ಹೊಸ ಸಂಸತ್ ಕಟ್ಟಡವು ಹೊಸ ಮತ್ತು ಹಳೆಯ ಸಹಜೀವನಕ್ಕೆ ಒಂದು ಉದಾಹರಣೆಯಾಗಿದೆ. ಇದು ಸಮಯ ಮತ್ತು ಅಗತ್ಯಗಳಿಗೆ ಅನುಗುಣವಾಗಿ ತನ್ನೊಳಗೆ ಬದಲಾವಣೆಗಳನ್ನು ಮಾಡಿಕೊಳ್ಳುವ ಪ್ರಯತ್ನವಾಗಿದೆ’ ಎಂದು ಅವರು ಹೇಳಿದರು.

ಅಂದಹಾಗೇ, ರಾಷ್ಟ್ರಪತಿಗಳ ಅರಮನೆ ರಾಷ್ಟ್ರಪತಿ ಭವನದಿಂದ ಐಕಾನಿಕ್ ಯುದ್ಧ ಸ್ಮಾರಕ ಇಂಡಿಯಾ ಗೇಟ್ ವರೆಗೆ 3 ಕಿ.ಮೀ.ರಾಜಪಥ್ ನ ಭಾಗವಾಗಿರುವ ಸರ್ಕಾರಿ ಕಟ್ಟಡಗಳನ್ನು ನಿರ್ಮಾಣ ಮತ್ತು ನವೀಕರಿಸುವ ಗುರಿಹೊಂದಿರುವ ₹ 20,000 ಕೋಟಿ ವೆಚ್ಚದ ಸೆಂಟ್ರಲ್ ವಿಸ್ಟಾ ಯೋಜನೆಯ ಮುಖ್ಯ ಭಾಗ ನೂತನ ಸಂಸತ್ ಭವನ ನಿರ್ಮಾಣವಾಗುತ್ತಿದೆ.

ಪ್ರಸ್ತಾವಿತ ನಾಲ್ಕು ಅಂತಸ್ತಿನ ಕಟ್ಟಡವು 64,500 ಚದರ ಮೀಟರ್ ವಿಸ್ತೀರ್ಣದಲ್ಲಿ ವಿಸ್ತಾರವಾಗಿದ್ದು, ಅಂದಾಜು ₹ 971 ಕೋಟಿ ವೆಚ್ಚವಾಗಲಿದೆ. 2022ರ ಆಗಸ್ಟ್ ನಲ್ಲಿ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಈ ಕಟ್ಟಡ ನಿರ್ಮಾಣ ಕಾರ್ಯ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

7 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

7 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

8 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

8 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

8 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago