Featured

ನೂತನ ಸಂಸತ್ ಭವನದ ಕಟ್ಟಡಕ್ಕೆ ಇಂದು ಪ್ರಧಾನಿ ಮೋದಿಯಿಂದ ಶಿಲಾನ್ಯಾಸ -Vishwanews24

ನೂತನ ಸಂಸತ್ ಭವನದ ಕಟ್ಟಡಕ್ಕೆ ಇಂದು ಪ್ರಧಾನಿ ಮೋದಿಯಿಂದ ಶಿಲಾನ್ಯಾಸ -Vishwanews24

ನವದೆಹಲಿ : ಬರೋಬ್ಬರಿ 917 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಂಸತ್ ಭವನದ ಕಟ್ಟಡಕ್ಕೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ನಿರ್ಮಿಸಲಿರುವ 971 ಕೋಟಿ ರು. ವೆಚ್ಚದ ನೂತನ ಸಂಸತ್‌ ಕಟ್ಟಡಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಬುಧವಾರ ಮಧ್ಯಾಹ್ನ 1 ಗಂಟೆಗೆ ಶಂಕುಸ್ಥಾಪನೆ ನೆರವೇರಿಸಿ ಭೂಮಿ ಪೂಜೆ ಮಾಡಲಿದ್ದಾರೆ. ವಿಶೇಷವೆಂದರೆ ಭೂಮಿ ಪೂಜಾ ಕಾರ್ಯಕ್ರಮದ ಹೊಣೆ ಶೃಂಗೇರಿ ಮಠದ ಪುರೋಹಿತರಿಂದ ನಡೆಯಲಿದೆ.

ಹೊಸ ಸಂಸತ್ ಭವನದ ಭೂಮಿ ಪೂಜೆ ನೆರವೇರಿಸಿದ ಹೆಮ್ಮೆ ಕರ್ನಾಟಕಕ್ಕೆ ಸಿಗಲಿದೆ. ಹಿರಿಯ ಪುರೋಹಿತ ನಾಗರಾಜ ಅಡಿಗ ನೇತೃತ್ವದಲ್ಲಿ ಆರು ಮಂದಿ ಯ ತಂಡ ದೆಹಲಿಗೆ ತಲುಪಿದ್ದು, ಇಂದು ಬೆಳಗ್ಗೆಯಿಂದಲೇ ಪೂಜಾ ಕಾರ್ಯಕ್ರಮಗಳು ಶುರುವಾಗಲಿವೆ. ಮಧ್ಯಾಹ್ನ 12:40 ರಿಂದ 1:15 ಗಂಟೆಗೆ ಯೊಳಗೆ ಶಿಲಾನ್ಯಾಸ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಇಡೀ ಕಟ್ಟಡ ಭೂಕಂಪ ನಿರೋಧಕ ಶಕ್ತಿ ಹೊಂದಿರಲಿದೆ. ನಿರ್ಮಾಣ ಕಾಮಗಾರಿಯಲ್ಲಿ ಪ್ರತ್ಯಕ್ಷವಾಗಿ 2000, ಪರೋಕ್ಷವಾಗಿ 9000 ಜನ ಭಾಗಿಯಾಗಲಿದ್ದಾರೆ.

ಮುಂದೆ ಸಂಸದರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭವಿಷ್ಯದ 100 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಈ ಭವನವನ್ನು ನಿರ್ಮಿಸಲಾಗುತ್ತಿದೆ.ಆಸನಗಳು 60 ಸೆಂ.ಮೀ. ಅಗಲ ಮತ್ತು 40 ಸೆಂ.ಮೀ. ಎತ್ತರ ಇರಲಿದೆ. ನಾಲ್ಕು ಮಹಡಿಗಳನ್ನು ಹೊಂದಿರಲಿದ್ದು, ಆರು ಪ್ರವೇಶದ್ವಾರಗಳನ್ನು ಹೊಂದಿರಲಿದೆ.ಜಂಟಿ ಅಧಿವೇಶನ ನಡೆಯುವ ಸಮಯದಲ್ಲಿ ಹೊಸ ಲೋಕಸಭೆಯಲ್ಲಿ 1,224 ಸದಸ್ಯರಿಗೆ ಕೂರಲು ಅವಕಾಶ ಕಲ್ಪಿಸಬಹುದಾಗಿದೆ.ನೂತನ ಸಂಸತ್ ಭವನದ ಕಟ್ಟಡವನ್ನು ನಿರ್ಮಿಸುವ ಸೆಂಟ್ರಲ್ ವಿಸ್ಟಾ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ಕೆಲವು ದಿನಗಳ ಹಿಂದಷ್ಟೇ ಸುಪ್ರೀಂಕೋರ್ಟ್ ಅನುಮತಿ ನೀಡಿತ್ತು.ಪ್ರಸ್ತುತ ಇರುವ ಸಂಸತ್ ಭವನಕ್ಕೆ 1921ರಲ್ಲಿ ಶಂಕು ಸ್ಥಾಪನೆ ನೆರವೇರಿಸಿ 83 ಲಕ್ಷ ರೂ. ವೆಚ್ಚದಲ್ಲಿ ಈ ಕಟ್ಟಡವನ್ನು ನಿರ್ಮಿಸಿ 1927ರ ಜನವರಿ 18ರಂದು ಉದ್ಘಾಟಿಸಲಾಗಿತ್ತು

ಎರಡು ವರ್ಷದೊಳಗೆ ಹೊಸ ಸಂಸತ್‌ ಭವನ ನಿರ್ಮಾಣ ಪೂರ್ಣಗೊಳಿಸಿ 75ನೇ ಸ್ವಾತಂತ್ರ್ಯೋತ್ಸವವನ್ನು ಅಲ್ಲೇ ಆಚರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಹೊಸ ಸಂಸತ್‌ ಭವನ ಒಟ್ಟು 64,500 ಚದರ ಮೀಟರ್‌ ವಿಸ್ತೀರ್ಣ ಹೊಂದಿರಲಿದೆ.

 

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

14 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago