ಬೆಂಗಳೂರು: ನವದೆಹಲಿಯ ಹೊಸ ಸಂಸತ್ತು ಭವನಕ್ಕೆ ಅಡಿಗಲ್ಲು ಹಾಕಿದ ಬಳಿಕ 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಮಾತನಾಡಿದ್ದು ಇದೀಗ ವೈರಲ್ ಆಗಿದೆ.
12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಆಧಾರದ ಮೇಲೆ ಸಂಸತ್ತು ಭವನ ನಿರ್ಮಾಣ ರೂಪುಗೊಂಡಿತು. ಬಸವಣ್ಣನವರು ಹೇಳಿದ್ದರು, ಈ ಅನುಭವ ಮಂಟಪ ನಾಡಿನ, ರಾಜ್ಯ-ರಾಷ್ಟ್ರದ ಜನರ ಉನ್ನತಿಗೆ ಕೆಲಸ ಮಾಡುತ್ತದೆ. ಅನುಭವ ಮಂಟಪ ಲೋಕತಂತ್ರ, ಜನಹಿತದ ಸ್ವರೂಪವಾಗಿತ್ತು ಎಂದು ಹೇಳಿ ಪ್ರಧಾನಿ ಮೋದಿ ಗಮನ ಸೆಳೆದರು.
ಕನ್ನಡದಲ್ಲಿ ಮಾತನಾಡಿದ ಮೋದಿ, “ಅನುಭವ ಮಂಟಪ ನಾಡಿನ ಜನರ ಅಭಿವೃದ್ಧಿಗಾಗಿ ಮತ್ತು ಉನ್ನತಿಗಾಗಿ ಕೆಲಸ ಮಾಡುತ್ತದೆ ಎಂದರು”.
ಅವರು ಮಾತನಾಡಿರುವ ವಿಡಿಯೊ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಹೊಸ ಸಂಸತ್ತು ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ವಿಶ್ವದ ಮೊದಲ ಸಂಸತ್ತು ಅನುಭವ ಮಂಟಪ ಎಂದು ಹೇಳಿ ಒತ್ತು ನೀಡುವ ಮೂಲಕ ಭಾರತದ ಪ್ರಜಾಪ್ರಭುತ್ವಕ್ಕೆ ಆಳವಾದ ಸಾಂಸ್ಕೃತಿಕ ಹಿನ್ನೆಲೆಯಿದೆ ಎಂದು ಹೇಳಿದ್ದಾರೆ ಎಂದು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…