ಬೆಂಗಳೂರು: ನವದೆಹಲಿಯ ಹೊಸ ಸಂಸತ್ತು ಭವನಕ್ಕೆ ಅಡಿಗಲ್ಲು ಹಾಕಿದ ಬಳಿಕ 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಮಾತನಾಡಿದ್ದು ಇದೀಗ ವೈರಲ್ ಆಗಿದೆ.
12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಆಧಾರದ ಮೇಲೆ ಸಂಸತ್ತು ಭವನ ನಿರ್ಮಾಣ ರೂಪುಗೊಂಡಿತು. ಬಸವಣ್ಣನವರು ಹೇಳಿದ್ದರು, ಈ ಅನುಭವ ಮಂಟಪ ನಾಡಿನ, ರಾಜ್ಯ-ರಾಷ್ಟ್ರದ ಜನರ ಉನ್ನತಿಗೆ ಕೆಲಸ ಮಾಡುತ್ತದೆ. ಅನುಭವ ಮಂಟಪ ಲೋಕತಂತ್ರ, ಜನಹಿತದ ಸ್ವರೂಪವಾಗಿತ್ತು ಎಂದು ಹೇಳಿ ಪ್ರಧಾನಿ ಮೋದಿ ಗಮನ ಸೆಳೆದರು.
ಕನ್ನಡದಲ್ಲಿ ಮಾತನಾಡಿದ ಮೋದಿ, “ಅನುಭವ ಮಂಟಪ ನಾಡಿನ ಜನರ ಅಭಿವೃದ್ಧಿಗಾಗಿ ಮತ್ತು ಉನ್ನತಿಗಾಗಿ ಕೆಲಸ ಮಾಡುತ್ತದೆ ಎಂದರು”.
ಅವರು ಮಾತನಾಡಿರುವ ವಿಡಿಯೊ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಹೊಸ ಸಂಸತ್ತು ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ವಿಶ್ವದ ಮೊದಲ ಸಂಸತ್ತು ಅನುಭವ ಮಂಟಪ ಎಂದು ಹೇಳಿ ಒತ್ತು ನೀಡುವ ಮೂಲಕ ಭಾರತದ ಪ್ರಜಾಪ್ರಭುತ್ವಕ್ಕೆ ಆಳವಾದ ಸಾಂಸ್ಕೃತಿಕ ಹಿನ್ನೆಲೆಯಿದೆ ಎಂದು ಹೇಳಿದ್ದಾರೆ ಎಂದು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…