Featured

ನೂತನ ಸಂಸತ್ ಭವನ ಶಂಕುಸ್ಥಾಪನೆ: ಬಸವಣ್ಣನವರ ಅನುಭವ ಮಂಟಪದ ಕುರಿತು ಕನ್ನಡದಲ್ಲಿ ಮಾತನಾಡಿದ ಪ್ರಧಾನಿ ಮೋದಿ Vishwanews24

ನೂತನ ಸಂಸತ್ ಭವನ ಶಂಕುಸ್ಥಾಪನೆ: ಬಸವಣ್ಣನವರ ಅನುಭವ ಮಂಟಪದ ಕುರಿತು ಕನ್ನಡದಲ್ಲಿ ಮಾತನಾಡಿದ ಪ್ರಧಾನಿ ಮೋದಿ Vishwanews24

ಬೆಂಗಳೂರು: ನವದೆಹಲಿಯ ಹೊಸ ಸಂಸತ್ತು ಭವನಕ್ಕೆ ಅಡಿಗಲ್ಲು ಹಾಕಿದ ಬಳಿಕ 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಮಾತನಾಡಿದ್ದು ಇದೀಗ ವೈರಲ್ ಆಗಿದೆ.

 

12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಆಧಾರದ ಮೇಲೆ ಸಂಸತ್ತು ಭವನ ನಿರ್ಮಾಣ ರೂಪುಗೊಂಡಿತು. ಬಸವಣ್ಣನವರು ಹೇಳಿದ್ದರು, ಈ ಅನುಭವ ಮಂಟಪ ನಾಡಿನ, ರಾಜ್ಯ-ರಾಷ್ಟ್ರದ ಜನರ ಉನ್ನತಿಗೆ ಕೆಲಸ ಮಾಡುತ್ತದೆ. ಅನುಭವ ಮಂಟಪ ಲೋಕತಂತ್ರ, ಜನಹಿತದ ಸ್ವರೂಪವಾಗಿತ್ತು ಎಂದು ಹೇಳಿ ಪ್ರಧಾನಿ ಮೋದಿ ಗಮನ ಸೆಳೆದರು.

ಕನ್ನಡದಲ್ಲಿ ಮಾತನಾಡಿದ ಮೋದಿ, “ಅನುಭವ ಮಂಟಪ ನಾಡಿನ ಜನರ ಅಭಿವೃದ್ಧಿಗಾಗಿ ಮತ್ತು ಉನ್ನತಿಗಾಗಿ ಕೆಲಸ ಮಾಡುತ್ತದೆ ಎಂದರು”.

ಅವರು ಮಾತನಾಡಿರುವ ವಿಡಿಯೊ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಹೊಸ ಸಂಸತ್ತು ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ವಿಶ್ವದ ಮೊದಲ ಸಂಸತ್ತು ಅನುಭವ ಮಂಟಪ ಎಂದು ಹೇಳಿ ಒತ್ತು ನೀಡುವ ಮೂಲಕ ಭಾರತದ ಪ್ರಜಾಪ್ರಭುತ್ವಕ್ಕೆ ಆಳವಾದ ಸಾಂಸ್ಕೃತಿಕ ಹಿನ್ನೆಲೆಯಿದೆ ಎಂದು ಹೇಳಿದ್ದಾರೆ ಎಂದು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 hour ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 hour ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

5 hours ago