ಬೆಂಗಳೂರು: ನವದೆಹಲಿಯ ಹೊಸ ಸಂಸತ್ತು ಭವನಕ್ಕೆ ಅಡಿಗಲ್ಲು ಹಾಕಿದ ಬಳಿಕ 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಮಾತನಾಡಿದ್ದು ಇದೀಗ ವೈರಲ್ ಆಗಿದೆ.
12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಆಧಾರದ ಮೇಲೆ ಸಂಸತ್ತು ಭವನ ನಿರ್ಮಾಣ ರೂಪುಗೊಂಡಿತು. ಬಸವಣ್ಣನವರು ಹೇಳಿದ್ದರು, ಈ ಅನುಭವ ಮಂಟಪ ನಾಡಿನ, ರಾಜ್ಯ-ರಾಷ್ಟ್ರದ ಜನರ ಉನ್ನತಿಗೆ ಕೆಲಸ ಮಾಡುತ್ತದೆ. ಅನುಭವ ಮಂಟಪ ಲೋಕತಂತ್ರ, ಜನಹಿತದ ಸ್ವರೂಪವಾಗಿತ್ತು ಎಂದು ಹೇಳಿ ಪ್ರಧಾನಿ ಮೋದಿ ಗಮನ ಸೆಳೆದರು.
ಕನ್ನಡದಲ್ಲಿ ಮಾತನಾಡಿದ ಮೋದಿ, “ಅನುಭವ ಮಂಟಪ ನಾಡಿನ ಜನರ ಅಭಿವೃದ್ಧಿಗಾಗಿ ಮತ್ತು ಉನ್ನತಿಗಾಗಿ ಕೆಲಸ ಮಾಡುತ್ತದೆ ಎಂದರು”.
ಅವರು ಮಾತನಾಡಿರುವ ವಿಡಿಯೊ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಹೊಸ ಸಂಸತ್ತು ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ವಿಶ್ವದ ಮೊದಲ ಸಂಸತ್ತು ಅನುಭವ ಮಂಟಪ ಎಂದು ಹೇಳಿ ಒತ್ತು ನೀಡುವ ಮೂಲಕ ಭಾರತದ ಪ್ರಜಾಪ್ರಭುತ್ವಕ್ಕೆ ಆಳವಾದ ಸಾಂಸ್ಕೃತಿಕ ಹಿನ್ನೆಲೆಯಿದೆ ಎಂದು ಹೇಳಿದ್ದಾರೆ ಎಂದು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…