ಬೆಂಗಳೂರು: ನವದೆಹಲಿಯ ಹೊಸ ಸಂಸತ್ತು ಭವನಕ್ಕೆ ಅಡಿಗಲ್ಲು ಹಾಕಿದ ಬಳಿಕ 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಮಾತನಾಡಿದ್ದು ಇದೀಗ ವೈರಲ್ ಆಗಿದೆ.
12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಆಧಾರದ ಮೇಲೆ ಸಂಸತ್ತು ಭವನ ನಿರ್ಮಾಣ ರೂಪುಗೊಂಡಿತು. ಬಸವಣ್ಣನವರು ಹೇಳಿದ್ದರು, ಈ ಅನುಭವ ಮಂಟಪ ನಾಡಿನ, ರಾಜ್ಯ-ರಾಷ್ಟ್ರದ ಜನರ ಉನ್ನತಿಗೆ ಕೆಲಸ ಮಾಡುತ್ತದೆ. ಅನುಭವ ಮಂಟಪ ಲೋಕತಂತ್ರ, ಜನಹಿತದ ಸ್ವರೂಪವಾಗಿತ್ತು ಎಂದು ಹೇಳಿ ಪ್ರಧಾನಿ ಮೋದಿ ಗಮನ ಸೆಳೆದರು.
ಕನ್ನಡದಲ್ಲಿ ಮಾತನಾಡಿದ ಮೋದಿ, “ಅನುಭವ ಮಂಟಪ ನಾಡಿನ ಜನರ ಅಭಿವೃದ್ಧಿಗಾಗಿ ಮತ್ತು ಉನ್ನತಿಗಾಗಿ ಕೆಲಸ ಮಾಡುತ್ತದೆ ಎಂದರು”.
ಅವರು ಮಾತನಾಡಿರುವ ವಿಡಿಯೊ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಹೊಸ ಸಂಸತ್ತು ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ವಿಶ್ವದ ಮೊದಲ ಸಂಸತ್ತು ಅನುಭವ ಮಂಟಪ ಎಂದು ಹೇಳಿ ಒತ್ತು ನೀಡುವ ಮೂಲಕ ಭಾರತದ ಪ್ರಜಾಪ್ರಭುತ್ವಕ್ಕೆ ಆಳವಾದ ಸಾಂಸ್ಕೃತಿಕ ಹಿನ್ನೆಲೆಯಿದೆ ಎಂದು ಹೇಳಿದ್ದಾರೆ ಎಂದು ಬಿಜೆಪಿಯ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…