ನವದೆಹಲಿ: ಹಿಂದೂ ದೇವರ ಅವಹೇಳನ ಮಾಡಿದ್ದನ್ನು ವಿರೋಧಿಸಿ ಪ್ರವಾದಿ ಮೊಹಮ್ಮದ್ ಕುರಿತಂತೆ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರಿಗೆ ಸುಪ್ರೀಂಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ. ನೂಪುರ್ ಅವರನ್ನು ಬಂಧಿಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಕೋರ್ಟ್ ತಿರಸ್ಕರಿಸಿದೆ.
ಹಿಂದೂ ದೇವರ ಅವಹೇಳನವನ್ನು ಸಹಿಸದೇ ನೂಪುರ್ ಅವರು ಪ್ರವಾದಿ ಮೊಹಮ್ಮದ್ ಕುರಿತು ನೀಡಿದ್ದ ಹೇಳಿಕೆ ಭಾರತದ ಒಂದು ವರ್ಗ ಹಾಗೂ ಹಲ ಮುಸ್ಲಿಂ ರಾಷ್ಟ್ರಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹೇಳಿಕೆ ಹಿಂಸಾಚಾರ ಸ್ವರೂಪವನ್ನೂ ಪಡೆದುಕೊಂಡಿದ್ದು, ಹಲವು ಕಡೆಗಳಲ್ಲಿ ಭಾರಿ ಪ್ರತಿಭಟನೆಗಳೂ ನಡೆದಿವೆ. ಈ ನಡುವೆಯೇ ಇವರನ್ನು ಬಂಧಿಸಲು ಆದೇಶಿಸುವಂತೆ ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿತ್ತು.
ತನ್ನ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ಗವಿಯಪ್ಪ – Vishwanews24
ಆದರೆ ಈ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲು ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ನೇತೃತ್ವದ ಪೀಠ ನಿರಾಕರಿಸಿದೆ. ‘ನ್ಯಾಯಾಲಯವು ಯಾವುದೇ ಒಂದು ತೀರ್ಪನ್ನು ನೀಡುವಾಗ ದೂರಗಾಮಿ ಪರಿಣಾಮಗಳನ್ನೂ ಅವಲೋಕಿಸಬೇಕಾಗುತ್ತದೆ. ಅವರನ್ನು ಬಂಧಿಸಿ ಎಂದು ನೀವು ಸರಳವಾಗಿ ಹೇಳಿಬಿಟ್ಟರೆ ಆಗುವುದಿಲ್ಲ. ನಿಜವಾಗಿಯೂ ಆಗಿರುವುದೇನು? ಇಂಥ ಆದೇಶಗಳನ್ನು ಹೊರಡಿಸಿದರೆ ಅದರಿಂದ ಆಗುವ ಪರಿಣಾಮಗಳ ಬಗ್ಗೆಯೂ ಕೋರ್ಟ್ ಯೋಚನೆ ಮಾಡಬೇಕಾಗುತ್ತದೆ’ ಎಂದು ನ್ಯಾಯಮೂರ್ತಿಗಳು ಹೇಳಿದರು.
ಆದ್ದರಿಂದ ಈ ಅರ್ಜಿಯನ್ನು ಸುಮ್ಮನೇ ಹಿಂದಕ್ಕೆ ಪಡೆದುಕೊಳ್ಳುವುದು ಉತ್ತಮ ಎಂದರು. ಇದಕ್ಕೆ ಅನುಮತಿ ನೀಡಿದ ಅರ್ಜಿದಾರರ ಪರ ವಕೀಲರು, ಅರ್ಜಿಯನ್ನು ಹಿಂದಕ್ಕೆ ಪಡೆದುಕೊಂಡರು. ಈ ಹಿನ್ನೆಲೆಯಲ್ಲಿ ಅರ್ಜಿಗೆ ಮಾನ್ಯತೆ ಇಲ್ಲ ಎಂದ ಕೋರ್ಟ್ ಅದನ್ನು ವಜಾಗೊಳಿಸಿತು
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…