Featured

ನೂಪುರ್​ ಶರ್ಮಾ ಬಂಧನಕ್ಕೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ – Vishwanews24

ನೂಪುರ್​ ಶರ್ಮಾ ಬಂಧನಕ್ಕೆ ಕೋರಿದ್ದ ಮನವಿ ಅರ್ಜಿ ತಿರಸ್ಕರಿಸಿದ ಸುಪ್ರೀಂ

ನವದೆಹಲಿ: ಹಿಂದೂ ದೇವರ ಅವಹೇಳನ ಮಾಡಿದ್ದನ್ನು ವಿರೋಧಿಸಿ ಪ್ರವಾದಿ ಮೊಹಮ್ಮದ್​ ಕುರಿತಂತೆ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರಿಗೆ ಸುಪ್ರೀಂಕೋರ್ಟ್​ನಿಂದ ಬಿಗ್​ ರಿಲೀಫ್​ ಸಿಕ್ಕಿದೆ. ನೂಪುರ್ ಅವರನ್ನು ಬಂಧಿಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಕೋರ್ಟ್​ ತಿರಸ್ಕರಿಸಿದೆ.

ಹಿಂದೂ ದೇವರ ಅವಹೇಳನವನ್ನು ಸಹಿಸದೇ ನೂಪುರ್​ ಅವರು ಪ್ರವಾದಿ ಮೊಹಮ್ಮದ್​ ಕುರಿತು ನೀಡಿದ್ದ ಹೇಳಿಕೆ ಭಾರತದ ಒಂದು ವರ್ಗ ಹಾಗೂ ಹಲ ಮುಸ್ಲಿಂ ರಾಷ್ಟ್ರಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹೇಳಿಕೆ ಹಿಂಸಾಚಾರ ಸ್ವರೂಪವನ್ನೂ ಪಡೆದುಕೊಂಡಿದ್ದು, ಹಲವು ಕಡೆಗಳಲ್ಲಿ ಭಾರಿ ಪ್ರತಿಭಟನೆಗಳೂ ನಡೆದಿವೆ. ಈ ನಡುವೆಯೇ ಇವರನ್ನು ಬಂಧಿಸಲು ಆದೇಶಿಸುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.

ತನ್ನ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ಗವಿಯಪ್ಪ – Vishwanews24

ಆದರೆ ಈ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲು ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ನೇತೃತ್ವದ ಪೀಠ ನಿರಾಕರಿಸಿದೆ. ‘ನ್ಯಾಯಾಲಯವು ಯಾವುದೇ ಒಂದು ತೀರ್ಪನ್ನು ನೀಡುವಾಗ ದೂರಗಾಮಿ ಪರಿಣಾಮಗಳನ್ನೂ ಅವಲೋಕಿಸಬೇಕಾಗುತ್ತದೆ. ಅವರನ್ನು ಬಂಧಿಸಿ ಎಂದು ನೀವು ಸರಳವಾಗಿ ಹೇಳಿಬಿಟ್ಟರೆ ಆಗುವುದಿಲ್ಲ. ನಿಜವಾಗಿಯೂ ಆಗಿರುವುದೇನು? ಇಂಥ ಆದೇಶಗಳನ್ನು ಹೊರಡಿಸಿದರೆ ಅದರಿಂದ ಆಗುವ ಪರಿಣಾಮಗಳ ಬಗ್ಗೆಯೂ ಕೋರ್ಟ್​ ಯೋಚನೆ ಮಾಡಬೇಕಾಗುತ್ತದೆ’ ಎಂದು ನ್ಯಾಯಮೂರ್ತಿಗಳು ಹೇಳಿದರು.

ಆದ್ದರಿಂದ ಈ ಅರ್ಜಿಯನ್ನು ಸುಮ್ಮನೇ ಹಿಂದಕ್ಕೆ ಪಡೆದುಕೊಳ್ಳುವುದು ಉತ್ತಮ ಎಂದರು. ಇದಕ್ಕೆ ಅನುಮತಿ ನೀಡಿದ ಅರ್ಜಿದಾರರ ಪರ ವಕೀಲರು, ಅರ್ಜಿಯನ್ನು ಹಿಂದಕ್ಕೆ ಪಡೆದುಕೊಂಡರು. ಈ ಹಿನ್ನೆಲೆಯಲ್ಲಿ ಅರ್ಜಿಗೆ ಮಾನ್ಯತೆ ಇಲ್ಲ ಎಂದ ಕೋರ್ಟ್​ ಅದನ್ನು ವಜಾಗೊಳಿಸಿತು

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

5 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

5 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago