Featured

ನೂಪುರ್ ಶರ್ಮಾ ರ ಅಪಮಾನಕಾರಿ‌ ಹೇಳಿಕೆ ; ಬಿಜೆಪಿಯ ಎಲ್ಲಾ ನಾಯಕರಲ್ಲೂ ಧರ್ಮದ ಡ್ರಗ್ಸ್ ನಶೆ ಮಿತಿಮೀರಿ‌ ಹೋಗಿದೆ : ದಿನೇಶ್ ಗುಂಡುರಾವ್

ಬಿಜೆಪಿ ನಾಯಕರ ಧರ್ಮ ದ್ವೇಷದ ಹೇಳಿಕೆಗಳು ವಿಶ್ವ ಮಟ್ಟದಲ್ಲಿ‌ ಭಾರತಕ್ಕೆ ಕಪ್ಪುಚುಕ್ಕೆ..

ಬಿಜೆಪಿ ನಾಯಕರ‌ ಮಾತುಗಳು ದೇಶದ ಗೌರವ ಹಾಳು ಮಾಡುತ್ತಿರುವುದಲ್ಲದೆ,ದೇಶವನ್ನು ಸರ್ವನಾಶಕ್ಕೆ ಕೊಂಡೊಯ್ಯುತ್ತಿದೆ..

ಬೆಂಗಳೂರು: ಎಲ್ಲಾ ಬಿಜೆಪಿ ನಾಯಕರಲ್ಲೂ ಧರ್ಮದ ಡ್ರಗ್ಸ್ ನಶೆ ಮಿತಿಮೀರಿ‌ ಹೋಗಿದ್ದು ನೂಪುರ್ ಶರ್ಮಾ ರ ಅಪಮಾನಕಾರಿ‌ ಹೇಳಿಕೆ ಒಂದು ಸಣ್ಣ ನಿದರ್ಶನವಷ್ಟೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಆಕ್ರೋಶವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ” ಬಿಜೆಪಿ ನಾಯಕರ ಧರ್ಮ ದ್ವೇಷದ ಹೇಳಿಕೆಗಳು ವಿಶ್ವ ಮಟ್ಟದಲ್ಲಿ‌ ಭಾರತಕ್ಕೆ ಕಪ್ಪುಚುಕ್ಕೆ. ನೂಪರ್ ಶರ್ಮಾರ ಅಪಮಾನಕಾರಿ‌ ಹೇಳಿಕೆ ಒಂದು ಸಣ್ಣ ನಿದರ್ಶನವಷ್ಟೆ. ಈಗ ಎಲ್ಲಾ ಬಿಜೆಪಿ ನಾಯಕರಲ್ಲೂ ಧರ್ಮದ ಡ್ರಗ್ಸ್ ನಶೆ ಮಿತಿಮೀರಿ‌ ಹೋಗಿದೆ. ಬಿಜೆಪಿ ನಾಯಕರ‌ ಮಾತುಗಳು ದೇಶದ ಗೌರವ ಹಾಳು ಮಾಡುತ್ತಿರುವುದಲ್ಲದೆ,ದೇಶವನ್ನು ಸರ್ವನಾಶಕ್ಕೆ ಕೊಂಡೊಯ್ಯುತ್ತಿದೆ ಎಂದು ಆರೋಪಿಸಿದ್ದಾರೆ.

ಧರ್ಮ ಶ್ರೇಷ್ಟತೆಯ ವ್ಯಸನ ಅತ್ಯಂತ ಅಪಾಯಕಾರಿ. ಬಿಜೆಪಿ ನಾಯಕರು ಈ ವ್ಯಸನಕ್ಕೆ ತುತ್ತಾಗಿರುವುದಲ್ಲದೆ, ಈ ವ್ಯಸನವನ್ನು ಇಡೀ ದೇಶಾದ್ಯಾಂತ ಸಾಂಕ್ರಾಮಿಕದಂತೆ ಹರಡುತ್ತಿದ್ದಾರೆ.ದೇಶದಲ್ಲಿ ಈಗ ದ್ವೇಷದ ವಾತಾವರಣವಿದೆ. ಇದರಿಂದ ದೇಶದ ಮಾನ ಅಂತರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗುತ್ತಿದೆ. ಬಿಜೆಪಿಯವರು ಭಾರತವನ್ನು ಏನು ಮಾಡಲು ಹೊರಟಿದ್ದಾರೆ‌ ಎಂದು ಪ್ರಶ್ನಿಸಿದ್ದಾರೆ.

ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎಂಬಂತೆ‌ ಉಚ್ಛ ಸ್ಥಾನದಲ್ಲಿರು ಬಿಜೆಪಿಯ ಎಲ್ಲಾ ನಾಯಕರ ತಲೆಯಲ್ಲೂ ಧರ್ಮಾಂಧತೆಯ ಅಮಲು ತುಂಬಿದೆ. ನೂಪುರ್ ತಮ್ಮ ನಾಯಕರ ಅಂತರ್ಗತ ಭಾವನೆಯನ್ನೇ ಮಾತುಗಳ ಮೂಲಕ ಹೊರಹಾಕಿ ಹಿರಿಯಕ್ಕನ ಚಾಳಿ ಅನುಸರಿಸಿದ್ದಾರಷ್ಟೆ. ಏನೇ ಆದರೂ ಬಿಜೆಪಿಯವರ ಈ ಧೋರಣೆ ದೇಶದ ಸ್ವಾಸ್ಥ್ಯಕ್ಕೆ‌ ಪೂರಕವಲ್ಲ. ಇನ್ನಾದರೂ ಬದಲಾಗಿ ಬಿಜೆಪಿಯವರೇ ಎಂದು ಹೇಳಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

21 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago