Featured

ನೂಪುರ್ ಶರ್ಮಾ ರ ಅಪಮಾನಕಾರಿ‌ ಹೇಳಿಕೆ ; ಬಿಜೆಪಿಯ ಎಲ್ಲಾ ನಾಯಕರಲ್ಲೂ ಧರ್ಮದ ಡ್ರಗ್ಸ್ ನಶೆ ಮಿತಿಮೀರಿ‌ ಹೋಗಿದೆ : ದಿನೇಶ್ ಗುಂಡುರಾವ್

ಬಿಜೆಪಿ ನಾಯಕರ ಧರ್ಮ ದ್ವೇಷದ ಹೇಳಿಕೆಗಳು ವಿಶ್ವ ಮಟ್ಟದಲ್ಲಿ‌ ಭಾರತಕ್ಕೆ ಕಪ್ಪುಚುಕ್ಕೆ..

ಬಿಜೆಪಿ ನಾಯಕರ‌ ಮಾತುಗಳು ದೇಶದ ಗೌರವ ಹಾಳು ಮಾಡುತ್ತಿರುವುದಲ್ಲದೆ,ದೇಶವನ್ನು ಸರ್ವನಾಶಕ್ಕೆ ಕೊಂಡೊಯ್ಯುತ್ತಿದೆ..

ಬೆಂಗಳೂರು: ಎಲ್ಲಾ ಬಿಜೆಪಿ ನಾಯಕರಲ್ಲೂ ಧರ್ಮದ ಡ್ರಗ್ಸ್ ನಶೆ ಮಿತಿಮೀರಿ‌ ಹೋಗಿದ್ದು ನೂಪುರ್ ಶರ್ಮಾ ರ ಅಪಮಾನಕಾರಿ‌ ಹೇಳಿಕೆ ಒಂದು ಸಣ್ಣ ನಿದರ್ಶನವಷ್ಟೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಆಕ್ರೋಶವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ” ಬಿಜೆಪಿ ನಾಯಕರ ಧರ್ಮ ದ್ವೇಷದ ಹೇಳಿಕೆಗಳು ವಿಶ್ವ ಮಟ್ಟದಲ್ಲಿ‌ ಭಾರತಕ್ಕೆ ಕಪ್ಪುಚುಕ್ಕೆ. ನೂಪರ್ ಶರ್ಮಾರ ಅಪಮಾನಕಾರಿ‌ ಹೇಳಿಕೆ ಒಂದು ಸಣ್ಣ ನಿದರ್ಶನವಷ್ಟೆ. ಈಗ ಎಲ್ಲಾ ಬಿಜೆಪಿ ನಾಯಕರಲ್ಲೂ ಧರ್ಮದ ಡ್ರಗ್ಸ್ ನಶೆ ಮಿತಿಮೀರಿ‌ ಹೋಗಿದೆ. ಬಿಜೆಪಿ ನಾಯಕರ‌ ಮಾತುಗಳು ದೇಶದ ಗೌರವ ಹಾಳು ಮಾಡುತ್ತಿರುವುದಲ್ಲದೆ,ದೇಶವನ್ನು ಸರ್ವನಾಶಕ್ಕೆ ಕೊಂಡೊಯ್ಯುತ್ತಿದೆ ಎಂದು ಆರೋಪಿಸಿದ್ದಾರೆ.

ಧರ್ಮ ಶ್ರೇಷ್ಟತೆಯ ವ್ಯಸನ ಅತ್ಯಂತ ಅಪಾಯಕಾರಿ. ಬಿಜೆಪಿ ನಾಯಕರು ಈ ವ್ಯಸನಕ್ಕೆ ತುತ್ತಾಗಿರುವುದಲ್ಲದೆ, ಈ ವ್ಯಸನವನ್ನು ಇಡೀ ದೇಶಾದ್ಯಾಂತ ಸಾಂಕ್ರಾಮಿಕದಂತೆ ಹರಡುತ್ತಿದ್ದಾರೆ.ದೇಶದಲ್ಲಿ ಈಗ ದ್ವೇಷದ ವಾತಾವರಣವಿದೆ. ಇದರಿಂದ ದೇಶದ ಮಾನ ಅಂತರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗುತ್ತಿದೆ. ಬಿಜೆಪಿಯವರು ಭಾರತವನ್ನು ಏನು ಮಾಡಲು ಹೊರಟಿದ್ದಾರೆ‌ ಎಂದು ಪ್ರಶ್ನಿಸಿದ್ದಾರೆ.

ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎಂಬಂತೆ‌ ಉಚ್ಛ ಸ್ಥಾನದಲ್ಲಿರು ಬಿಜೆಪಿಯ ಎಲ್ಲಾ ನಾಯಕರ ತಲೆಯಲ್ಲೂ ಧರ್ಮಾಂಧತೆಯ ಅಮಲು ತುಂಬಿದೆ. ನೂಪುರ್ ತಮ್ಮ ನಾಯಕರ ಅಂತರ್ಗತ ಭಾವನೆಯನ್ನೇ ಮಾತುಗಳ ಮೂಲಕ ಹೊರಹಾಕಿ ಹಿರಿಯಕ್ಕನ ಚಾಳಿ ಅನುಸರಿಸಿದ್ದಾರಷ್ಟೆ. ಏನೇ ಆದರೂ ಬಿಜೆಪಿಯವರ ಈ ಧೋರಣೆ ದೇಶದ ಸ್ವಾಸ್ಥ್ಯಕ್ಕೆ‌ ಪೂರಕವಲ್ಲ. ಇನ್ನಾದರೂ ಬದಲಾಗಿ ಬಿಜೆಪಿಯವರೇ ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago